dharmastal case
ಬೆಂಗಳೂರು: ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿರುವ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಂಚು ರೂಪಿಸಲು ವಿದೇಶದಿಂದ ಸರ್ಕಾರೇತರ ಸಂಘಸಂಸ್ಥೆ(ಎನ್ಜಿಒ)ಗಳಿಗೆ ಹಣ ಬಂದಿದೆ ಎಂಬ ಶಂಕೆಯ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯ ರಂಗಪ್ರವೇಶ ಮಾಡಿದೆ.
ಕರ್ನಾಟಕ ಸೇರಿದಂತೆ ದೇಶದ ಕೆಲವು ಮುಂಚೂಣಿಯಲ್ಲಿರುವ ಎನ್ಜಿಒಗಳಿಗೆ ವಿದೇಶದಿಂದ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲು ಭಾರೀ ಪ್ರಮಾಣದ ಹಣ ಹರಿದುಬಂದಿದೆ ಎಂಬುದನ್ನು ಇ.ಡಿ ಪತ್ತೆ ಮಾಡಿದೆ.
ಇದೀಗ ಮಾನವಹಕ್ಕುಗಳು, ಮಹಿಳಾಪರ ಹೋರಾಟ ನಡೆಸುವ ಸಂಘಸಂಸ್ಥೆಯವರು ಸೇರಿದಂತೆ ರಾಜ್ಯದ ಕೆಲವು ಎನ್ಜಿಒಗಳ ಹಣದ ವಹಿವಾಟು ನಡೆದಿರುವ ಕುರಿತು ಇಡಿ ನೋಟಿಸ್ ನೀಡಲು ಸಿದ್ದತೆ ನಡೆಸಿದೆ ಎಂದು ತಿಳಿದುಬಂದಿದೆ.
ಮೇಲ್ನೋಟಕ್ಕೆ ಧರ್ಮಸ್ಥಳದ ವಿರುದ್ಧ ಎನ್ಜಿಒಗಳಿಗೆ ಹಣ ಜಮೆಯಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇದರ ಸತ್ಯಾಸತ್ಯತೆಯನ್ನು ಪತ್ತೆ ಮಾಡಲು ರಾಜ್ಯದ ನಾಲ್ಕಕ್ಕೂ ಹೆಚ್ಚು ಎನ್ಜಿಒಗಳಿಗೆ ನೋಟೀಸ್ ನೀಡಲು ಮುಂದಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯ(ಎಸ್ಬಿಐ), ಯೂನಿಯನ್ ಬ್ಯಾಂಕ್ ಆಫ್ ಇಂಡಿಯ(ಯುಬಿಐ), ಐಸಿಐಸಿಐ ಸೇರಿದಂತೆ ಕೆಲವು ಪ್ರತಿಷ್ಠಿತ ಬ್ಯಾಂಕ್ಗಳ ಖಾತೆಗಳಿಗೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮ) ಉಲ್ಲಂಘಿಸಿ ದೇಣಿಗೆ ರೂಪದಲ್ಲಿ ಹಣ ಪಡೆದಿರುವುದು ಕಂಡುಬಂದಿದೆ ಎನ್ನಲಾಗುತ್ತಿದೆ.
ಪ್ರಸ್ತುತ ವಿಶೇಷ ತನಿಖಾ ತಂಡ(ಎಸ್ಐಟಿ )ದ ವಶದಲ್ಲಿರುವ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ತನಿಖೆ ವೇಳೆ ಬಾಯ್ಬಿಟ್ಟಿರುವ ಮಾಹಿತಿಯಂತೆ ತನಗೆ ಯಾರೆಲ್ಲ ಹಣದ ಆಮಿಷವೊಡ್ಡಿದ್ದರು ಎಂಬುದನ್ನು ಬಹಿರಂಗಪಡಿಸಿದ್ದಾನೆ ಎಂದು ತಿಳಿದುಬಂದಿದೆ.
ಬಂಧನದ ನಂತರ ಹಲವಾರು ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿರುವುದರಿಂದ ಪ್ರಕರಣವನ್ನು ಬೇಧಿಸಲು ಇಡಿ ಅಖಾಡಕ್ಕಿಳಿದಿದೆ. ಫೆಮಾ ಕಾಯ್ದೆ ಉಲ್ಲಂಘಿಸಿ ದೇಣಿಗೆ ಪಡೆದಿರುವುದು ಕಂಡುಬಂದಲ್ಲಿ ಎನ್ಜಿಒಗಳಿಗೆ ಕಾನೂನಿನ ಸಂಕಷ್ಟ ಎದುರಾಗಲಿದೆ.
ಅಲ್ಲದೆ ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಹೊರಟ್ಟಿದ್ದ ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…