ರಾಜ್ಯ

ಇಡಿ ಸಂಸ್ಥೆ ಒಂದು ಸಂಘಟನೆಯ ನಿಯಂತ್ರಣದಲ್ಲಿದೆ: ಬಿ.ಕೆ.ಹರಿಪ್ರಸಾದ್ ಆರೋಪ

ಚಿತ್ರದುರ್ಗ: ಮುಡಾ ಪ್ರಕರಣದಲ್ಲಿ ಮುಡಾ ಕಚೇರಿಯ ಮೇಲೆ ದಾಳಿ ನಡೆಸಿದ ಇಡಿ ಸಂಸ್ಥೆಯೂ ಒಂದು ಸಂಘಟನೆಯ ನಿಯಂತ್ರಣದಲ್ಲಿದೆ. ಅದನ್ನು ಸಮಯ ಬಂದಾಗ ತಿಳಿಸುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಆರೋಪಿಸಿದ್ದಾರೆ.

ಈ ಬಗ್ಗೆ ಚಿತ್ರದುರ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿಚಾರದಲ್ಲಿ ನಾನು ಸಾಫ್ಟ್‌ ಮತ್ತು ಹಾರ್ಡ್‌ ಅಲ್ಲ. ವಿಚಾರಗಳ ಆಧಾರದ ಮೇಲೆ ಮಾತನಾಡುತ್ತಿದ್ದೇವೆ ಅಷ್ಟೇ. ಬಿಜೆಪಿ ಅವರು ವಿನಾಃಕಾರಣ ಕಾಂಗ್ರೆಸ್‌ ಸರ್ಕಾರದ ಮೇಲೆ ಇಡಿ, ಸಿಬಿಐ ಹಾಗೂ ಐಟಿ ಮೂಲಕ ರಾಜಕೀಯ ಮಾಡುತ್ತಾರೆ. ಆ ಸಂದರ್ಭದಲ್ಲಿ ನಾನು ಮಾತನಾಡುತ್ತೇನೆ. ಇದರ ಅರ್ಥ ನಾನು ಸಾಫ್ಟ್‌ ಅಂತ ಅಲ್ಲ. ಅದರ ಬದಲು ನಾನು ಕೋಮುವಾದಿಗಳ ವಿರುದ್ಧ ನಾನು ಹಾರ್ಡ್‌ ಆಗಿರುತ್ತೇನೆ ಎಂದರು.

ಇನ್ನು ಮುಡಾ ಕಚೇರಿಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾದಲ್ಲಿ ಇಡಿ ಅಧಿಕಾರಿಗಳು ರೇಡ್‌ ಮಾಡಿದ್ದಾರೆ. ಆ ವೇಳೆ ಎರಡು ಬ್ಯಾಗ್‌ಗಳಲ್ಲಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಬಂದಿತ್ತು. ಆದರೆ, ವಾಸ್ತವವಾಗಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳು ಎರಡು ಬ್ಯಾಗ್‌ಗಳಷ್ಟು ಇರುವುದಿಲ್ಲ. ಇಡಿ ಅಧಿಕಾರಿಗಳು ಆ ಬ್ಯಾಗ್‌ನಲ್ಲಿ ನ್ಯೂಸ್‌ ಪೇಪರ್‌ಗಳನ್ನು ತೆಗೆದುಕೊಂಡು ಹೋಗಿರುತ್ತಾರೆ ಅಷ್ಟೇ ಎಂದು ಟೀಕೆ ಮಾಡಿದ್ದಾರೆ.

ಬಳಿಕ, ಇಡಿ ಅಧಿಕಾರಿಗಳು ನಿಜವಾಗಿಯೂ ರಾಜಕೀಯ ಲಾಭ ಪಡೆಯಲು ಎರಡೂ ಬ್ಯಾಗ್‌ಗಳನ್ನು ಪ್ರರ್ದಶಿಸಿದ್ದಾರೆ. ಅಲ್ಲದೇ, ಈ ಸಂಸ್ಥೆಯ ಅಧಿಕಾರಿಗಳು ಒಂದು ಸಂಘಟನೆಯ ಹಿಡಿತದಲ್ಲಿದ್ದಾರೆ. ಅದನ್ನು ನಾನು ಸಮಯ ಬಂದಾಗ ತಿಳಿಸುತ್ತೇನೆ. ಅಲ್ಲದೇ, ಬಿಜೆಪಿ ಅವರು 25 ವರ್ಷ ಹಳೆಯದಾದ ಮುಡಾ ಪ್ರಕರಣದ ಬಗ್ಗೆ ರಾಜಕೀಯ ದ್ವೇಷ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

 

 

 

 

ಆಂದೋಲನ ಡೆಸ್ಕ್

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

6 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

9 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

9 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

9 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

9 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

9 hours ago