ರಾಜ್ಯ

ಇಡಿ ಸಂಸ್ಥೆ ಒಂದು ಸಂಘಟನೆಯ ನಿಯಂತ್ರಣದಲ್ಲಿದೆ: ಬಿ.ಕೆ.ಹರಿಪ್ರಸಾದ್ ಆರೋಪ

ಚಿತ್ರದುರ್ಗ: ಮುಡಾ ಪ್ರಕರಣದಲ್ಲಿ ಮುಡಾ ಕಚೇರಿಯ ಮೇಲೆ ದಾಳಿ ನಡೆಸಿದ ಇಡಿ ಸಂಸ್ಥೆಯೂ ಒಂದು ಸಂಘಟನೆಯ ನಿಯಂತ್ರಣದಲ್ಲಿದೆ. ಅದನ್ನು ಸಮಯ ಬಂದಾಗ ತಿಳಿಸುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಆರೋಪಿಸಿದ್ದಾರೆ.

ಈ ಬಗ್ಗೆ ಚಿತ್ರದುರ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿಚಾರದಲ್ಲಿ ನಾನು ಸಾಫ್ಟ್‌ ಮತ್ತು ಹಾರ್ಡ್‌ ಅಲ್ಲ. ವಿಚಾರಗಳ ಆಧಾರದ ಮೇಲೆ ಮಾತನಾಡುತ್ತಿದ್ದೇವೆ ಅಷ್ಟೇ. ಬಿಜೆಪಿ ಅವರು ವಿನಾಃಕಾರಣ ಕಾಂಗ್ರೆಸ್‌ ಸರ್ಕಾರದ ಮೇಲೆ ಇಡಿ, ಸಿಬಿಐ ಹಾಗೂ ಐಟಿ ಮೂಲಕ ರಾಜಕೀಯ ಮಾಡುತ್ತಾರೆ. ಆ ಸಂದರ್ಭದಲ್ಲಿ ನಾನು ಮಾತನಾಡುತ್ತೇನೆ. ಇದರ ಅರ್ಥ ನಾನು ಸಾಫ್ಟ್‌ ಅಂತ ಅಲ್ಲ. ಅದರ ಬದಲು ನಾನು ಕೋಮುವಾದಿಗಳ ವಿರುದ್ಧ ನಾನು ಹಾರ್ಡ್‌ ಆಗಿರುತ್ತೇನೆ ಎಂದರು.

ಇನ್ನು ಮುಡಾ ಕಚೇರಿಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾದಲ್ಲಿ ಇಡಿ ಅಧಿಕಾರಿಗಳು ರೇಡ್‌ ಮಾಡಿದ್ದಾರೆ. ಆ ವೇಳೆ ಎರಡು ಬ್ಯಾಗ್‌ಗಳಲ್ಲಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಬಂದಿತ್ತು. ಆದರೆ, ವಾಸ್ತವವಾಗಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳು ಎರಡು ಬ್ಯಾಗ್‌ಗಳಷ್ಟು ಇರುವುದಿಲ್ಲ. ಇಡಿ ಅಧಿಕಾರಿಗಳು ಆ ಬ್ಯಾಗ್‌ನಲ್ಲಿ ನ್ಯೂಸ್‌ ಪೇಪರ್‌ಗಳನ್ನು ತೆಗೆದುಕೊಂಡು ಹೋಗಿರುತ್ತಾರೆ ಅಷ್ಟೇ ಎಂದು ಟೀಕೆ ಮಾಡಿದ್ದಾರೆ.

ಬಳಿಕ, ಇಡಿ ಅಧಿಕಾರಿಗಳು ನಿಜವಾಗಿಯೂ ರಾಜಕೀಯ ಲಾಭ ಪಡೆಯಲು ಎರಡೂ ಬ್ಯಾಗ್‌ಗಳನ್ನು ಪ್ರರ್ದಶಿಸಿದ್ದಾರೆ. ಅಲ್ಲದೇ, ಈ ಸಂಸ್ಥೆಯ ಅಧಿಕಾರಿಗಳು ಒಂದು ಸಂಘಟನೆಯ ಹಿಡಿತದಲ್ಲಿದ್ದಾರೆ. ಅದನ್ನು ನಾನು ಸಮಯ ಬಂದಾಗ ತಿಳಿಸುತ್ತೇನೆ. ಅಲ್ಲದೇ, ಬಿಜೆಪಿ ಅವರು 25 ವರ್ಷ ಹಳೆಯದಾದ ಮುಡಾ ಪ್ರಕರಣದ ಬಗ್ಗೆ ರಾಜಕೀಯ ದ್ವೇಷ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

 

 

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

10 mins ago

ಓದುಗರ ಪತ್ರ: ಒಟಿಟಿ ವೇದಿಕೆಗಳು ಕನ್ನಡ ಭಾಷೆಗೂ ಆದ್ಯತೆ ನೀಡಲಿ

ಇಂದು ಒಟಿಟಿ ವೇದಿಕೆಗಳಾದ ಅಮೆಜನ್ ಪ್ರೈಮ, ನೆಟ್‌ಫ್ಲಿಕ್ಸ್, ಡಿಸ್ನಿ+ಹಾಟ್‌ಸ್ಟಾರ್, ಜೀ೫, ಸೋನಿಲಿವ್ ಮುಂತಾದವುಗಳು ನಮ್ಮ ಮನರಂಜನೆಯ ಅವಿಭಾಜ್ಯ ಅಂಗವಾಗಿವೆ. ಮನೆಯಲ್ಲಿಯೇ…

12 mins ago

ಓದುಗರ ಪತ್ರ: ಖಾಸಗಿ ಕಾಲೇಜುಗಳ ಅನಗತ್ಯ ಶುಲ್ಕ ಹೆಚ್ಚಳ ನಿಯಂತ್ರಿಸಿ

ರಾಜ್ಯದಲ್ಲಿ ಸರ್ಕಾರಿ ವಿಶ್ವವಿದ್ಯಾನಿಲಯಗಳ ಸಂಯೋಜಿತ ಕೆಲವು ಖಾಸಗಿ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ಕಾಲೇಜು ಅಭಿವೃದ್ಧಿಯ ಹೆಸರಿನಲ್ಲಿ, ವಿಶ್ವವಿದ್ಯಾನಿಲಯದ ಸೂಚನೆ ಹೆಸರಿನಲ್ಲಿ…

14 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮೂರಡಿಯ ಮೂರ್ತಿಗೆ ಡಾಕ್ಟರಾದ ಕೀರ್ತಿ

ಕೋರ್ಟ್ ಮೆಟ್ಟಿಲು ಏರಿ ವೈದ್ಯಕೀಯ ಸೀಟು ಪಡೆದ ಸಾಹಸಿ ಗುಜರಾತಿನ ಭಾವನಗರದ ಗೋರ್ಕಿ ಗ್ರಾಮದ ಗಣೇಶ್ ಬರಯ್ಯ ಎಂಟು ಜನ…

16 mins ago

ಬರದಲ್ಲೂ ಜಾನುವಾರುಗಳ ಮೇವಿಗಿಲ್ಲ ಕೊರತೆ

ಕೆ.ಬಿ.ರಮೇಶನಾಯಕ ಹೋಬಳಿಗೊಂದರಂತೆ ೨೯ ಮೇವು ಬ್ಯಾಂಕ್ ತೆರೆಯಲು ಪ್ರಸ್ತಾವನೆ  ಮೈಸೂರು: ಪೂರ್ವ ಮುಂಗಾರು ಮತ್ತು ಮುಂಗಾರು ಮಳೆ ಕೈಕೊಟ್ಟಿದ್ದರಿಂದಾಗಿ ಮಳೆಯಾಶ್ರಿತ…

21 mins ago

ಮಂಜಿನ ನಡುವೆ ಕೇಸರಿ ರೈಲು; ಕಾಗಿನೆರೆ ದೃಶ್ಯ ವೈರಲ್

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಧಾನಿ ಮೋದಿ, ರೈಲ್ವೆ  ಸಚಿವ ಅಶ್ವಿನಿ ವೈಷ್ಣವ್ ಗಮನ ಸೆಳೆದ ಪಶ್ಚಿಮಘಟ್ಟದ ಪ್ರಕೃತಿ ಸೌಂದರ್ಯ ಸೋಮವಾರಪೇಟೆ: ಪಶ್ಚಿಮಘಟ್ಟದ…

27 mins ago