ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಇ.ಡಿ.ತನಿಖಾಧಿಕಾರಿ ವಿ.ಮುರುಳಿಕಣ್ಣನ್ ಎಂಬ ಹೆಸರಿನಲ್ಲಿ ನಾಳೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ಮುಡಾ ಹಗರಣದ ಬಗ್ಗೆಯ ತನಿಖೆಗಾಗಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಜನವರಿ.3 ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ.ತನಿಖಾ ಅಧಿಕಾರಿಗಳು ನೋಟಿಸ್ ನೀಡಿ, ಜನವರಿ.9ಕ್ಕೆ ವಿಚಾರಣೆಗೆ ಹಾಜರಾಗಲು ತಿಳಿಸಿದ್ದರು. ಆ ವೇಳೆ ಸಿಎಂ ಪತ್ನಿ ಪಾರ್ವತಿಯವರು ದಾಖಲೆಗಳ ಸಂಗ್ರಹಕ್ಕಾಗಿ ಕಾಲಾವಕಾಶ ಕೋರಿ ಮನವಿ ಮಾಡಿದ್ದರು. ಆದರೆ ಇದೀಗ ಮೊದಲ ನೋಟಿಸ್ಗೆ ವಿಚಾರಣೆಗೆ ಬಾರದ ಹಿನ್ನೆಲೆಯಲ್ಲಿ ಜನವರಿ.24 ರಂದು ನೋಟಿಸ್ ಜಾರಿ ಮಾಡಿದೆ.
ಈ ನೋಟಿಸ್ನ ಅನ್ವಯ ಜನವರಿ.28(ನಾಳೆ) ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿನಗರದ ಇ.ಡಿ.ಕಚೇರಿಗೆ ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದೆ.
ನೋಟಿಸ್ನಲ್ಲಿ ಏನಿದೆ?
ಮುಡಾ ಹಗರಣದ ವಿಚಾರವಾಗಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಪಿಎಂಎಲ್ಎ ಸೆಕ್ಷನ್ಗಳನ್ನು ಉಲ್ಲೇಖಿಸಿ, ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ತನಿಖಾಧಿಕಾರಿ ವಿ.ಮುರುಳಿಕಣ್ಣನ್ ಅವರ ಹೆಸರಿನಲ್ಲಿ ಇ.ಡಿ.ಸಂಸ್ಥೆಯೂ ನೋಟಿಸ್ ನೀಡಿದೆ.
ನನ್ನ ಪತ್ನಿಗೆ ನೋಟಿಸ್ ಬಂದಿರುವುದು ನಿಜ
ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ನನ್ನ ಪತ್ನಿಗೆ ಇ.ಡಿ.ಅಧಿಕಾರಿಗಳು ನೋಡಿರುವುದು ನಿಜ. ನನ್ನ ಪತ್ನಿಗೆ ಇ.ಡಿ.ಸಂಸ್ಥೆಯಿಂದ ನೋಟಿಸ್ ಬಂದಿರುವುದು ನಿಜ ಎಂದು ಹೇಳಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…