ರಾಜ್ಯ

ಮುಡಾ ಹಗರಣ: ಪಾರ್ವತಿ ಸಿದ್ದರಾಮಯ್ಯ ಅವರಿಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ.ನೋಟಿಸ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಇ.ಡಿ.ತನಿಖಾಧಿಕಾರಿ ವಿ.ಮುರುಳಿಕಣ್ಣನ್‌ ಎಂಬ ಹೆಸರಿನಲ್ಲಿ ನಾಳೆ ವಿಚಾರಣೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದೆ.

ಮುಡಾ ಹಗರಣದ ಬಗ್ಗೆಯ ತನಿಖೆಗಾಗಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಜನವರಿ.3 ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ.ತನಿಖಾ ಅಧಿಕಾರಿಗಳು ನೋಟಿಸ್‌ ನೀಡಿ, ಜನವರಿ.9ಕ್ಕೆ ವಿಚಾರಣೆಗೆ ಹಾಜರಾಗಲು ತಿಳಿಸಿದ್ದರು. ಆ ವೇಳೆ ಸಿಎಂ ಪತ್ನಿ ಪಾರ್ವತಿಯವರು ದಾಖಲೆಗಳ ಸಂಗ್ರಹಕ್ಕಾಗಿ ಕಾಲಾವಕಾಶ ಕೋರಿ ಮನವಿ ಮಾಡಿದ್ದರು. ಆದರೆ ಇದೀಗ ಮೊದಲ ನೋಟಿಸ್‌ಗೆ ವಿಚಾರಣೆಗೆ ಬಾರದ ಹಿನ್ನೆಲೆಯಲ್ಲಿ ಜನವರಿ.24 ರಂದು ನೋಟಿಸ್‌ ಜಾರಿ ಮಾಡಿದೆ.

ಈ ನೋಟಿಸ್‌ನ ಅನ್ವಯ ಜನವರಿ.28(ನಾಳೆ) ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿನಗರದ ಇ.ಡಿ.ಕಚೇರಿಗೆ ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿಗೊಳಿಸಿದೆ.

ನೋಟಿಸ್‌ನಲ್ಲಿ ಏನಿದೆ?

ಮುಡಾ  ಹಗರಣದ ವಿಚಾರವಾಗಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಪಿಎಂಎಲ್‌ಎ ಸೆಕ್ಷನ್‌ಗಳನ್ನು ಉಲ್ಲೇಖಿಸಿ, ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ  ತನಿಖಾಧಿಕಾರಿ ವಿ.ಮುರುಳಿಕಣ್ಣನ್‌ ಅವರ ಹೆಸರಿನಲ್ಲಿ ಇ.ಡಿ.ಸಂಸ್ಥೆಯೂ ನೋಟಿಸ್‌ ನೀಡಿದೆ.

ನನ್ನ ಪತ್ನಿಗೆ ನೋಟಿಸ್‌ ಬಂದಿರುವುದು ನಿಜ

ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ನನ್ನ ಪತ್ನಿಗೆ ಇ.ಡಿ.ಅಧಿಕಾರಿಗಳು ನೋಡಿರುವುದು ನಿಜ. ನನ್ನ ಪತ್ನಿಗೆ ಇ.ಡಿ.ಸಂಸ್ಥೆಯಿಂದ ನೋಟಿಸ್‌ ಬಂದಿರುವುದು ನಿಜ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

30 mins ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

1 hour ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

2 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

3 hours ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

7 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

9 hours ago