ed raids
ಬೆಂಗಳೂರು : ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜಾಮೀನಿನ ಮೇರೆಗೆ ಹೊರಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಸಂಬಂಧಿಸಿದಂತೆ ದೇಶದ ವಿವಿಧ ಕಡೆಗಳಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ನಗದು ಹಾಗೂ ಕೆ.ಜಿಗಟ್ಟಲೆ ಚಿನ್ನ ವಶಕ್ಕೆ ಪಡೆದುಕೊಂಡಿದೆ.
ಅಕ್ರಮ ಹಣ ವರ್ಗಾವಣೆ ಕಾಯ್ದೆ (ಪಿಎಂಎಲ್ ಎ) ಪ್ರಕರಣ ದಾಖಲಿಸಿಕೊಂಡಿದ್ದ ಇ.ಡಿ ಅಧಿಕಾರಿಗಳು ಕಳೆದ ಬುಧವಾರ ಹಾಗೂ ಗುರುವಾರ ಕಾರವಾರದಲ್ಲಿ ಶಾಸಕರ ನಿವಾಸ, ಗೋವಾ, ಮುಂಬೈ ಹಾಗೂ ದೆಹಲಿ ವಿವಿಧ ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದರು.
ಪರಿಶೀಲನೆ ವೇಳೆ ಅಕ್ರಮಕ್ಕೆ ಸಂಬಂಧಿಸಿದಂತೆ ದಾಖಲಾತಿಗಳು ದೊರೆತಿವೆ. ಇದಕ್ಕೆ ಪೂರಕವಾಗಿ ಇಮೇಲ್ ಮಾಡಿರುವುದು ಗೊತ್ತಾಗಿದೆ. ತಪಾಸಣೆ ವೇಳೆ 1.68 ಕೋಟಿ ನಗದು, 6.75 ಕೆ.ಜಿ ಮೌಲ್ಯದ ಚಿನ್ನದ ಬಿಸ್ಕತ್ಗಳು ಹಾಗೂ ಬ್ಯಾಂಕ್ ಖಾತೆಯಲ್ಲಿದ್ದ ಸುಮಾರು 14.13 ಕೋಟಿ ರೂ. ಹಣವನ್ನ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇ.ಡಿ ಅಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚಿತ್ತಾಕುಲ ಗ್ರಾಮದ ನಿವಾಸಿಯಾಗಿರುವ ಸತೀಶ್ ಮನೆಯಲ್ಲಿ ಅಧಿಕಾರಿಗಳು ಸತತ 22 ಗಂಟೆಗಳ ಕಾಲ ಶೋಧ ಕಾರ್ಯ ಕೈಗೊಂಡಿದ್ದರು. ದಾಳಿ ವೇಳೆ ಸತೀಶ್ ಮನೆಯಲ್ಲಿ ಇರಲಿಲ್ಲ. ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಅವರ ಅಂಗರಕ್ಷಕರನ್ನು ಸಂಪರ್ಕಿಸಿದರೂ ಶಾಸಕರ ಸುಳಿವು ಬಗ್ಗೆ ಪತ್ತೆಯಾಗಿರಲಿಲ್ಲ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯವು ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿತ್ತು. ಈ ಸಂಬಂಧ ಹೈಕೋರ್ಟ್, ಶಿಕ್ಷೆಗೆ ತಡೆಯಾಜ್ಞೆ ನೀಡಿತ್ತು. ಸದ್ಯ ಜಾಮೀನಿನ ಮೇಲೆ ಹೊರಗಿರುವ ಸತೀಶ್ ಅವರ ಮೇಲೆ ಸಿಬಿಐ ಹಾಗೂ ಲೋಕಾಯುಕ್ತ ತನಿಖೆಯ ವಿಚಾರಣೆ ಎದುರಿಸುತ್ತಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…