ಬೆಂಗಳೂರು: ಧರ್ಮ ಹಾಗೂ ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚಾಗುತ್ತಾ ಹೋಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ 21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ ಎಂಬ ಅಂತರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಗಿನ ಕಾಲದಿಂದಲೂ ಇರುವ ಜಾತಿ ವ್ಯವಸ್ಥೆಯಿಂದಲೇ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಎಲ್ಲಾ ಕಡೆ ಅಸಮಾನತೆ ಹೆಚ್ಚಾಯಿತು. ವಿದ್ಯಾವಂತರೇ ಹೆಚ್ಚು ಹೆಚ್ಚು ಜಾತಿವಾದಿಗಳಾಗುತ್ತಿರುವುದು ದೇಶದ ದೊಡ್ಡ ದುರಂತವಾಗಿದೆ.
ಜಾತಿ ಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು ಎಂದು ಕಿವಿಮಾತು ಹೇಳಿದರು.
ಜವಾಹರ್ಲಾಲ್ ನೆಹರೂ ಅವರು ವೈಜ್ಞಾನಿಕ ಮತು ವೈಚಾರಿಕ ಮಾರ್ಗದಲ್ಲಿ ಸಮಾಜವನ್ನು ಸನ್ನದ್ದಗೊಳಿಸಿ ದೇಶವನ್ನು ಮುನ್ನಡೆಸುತ್ತಿದ್ದರು ಎಂದರು.
ನಾವೆಲ್ಲರೂ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಈಡೇರಿಸಬೇಕಾಗಿದೆ. ಗಾಂಧಿಯವರ ಆಶಯದಂತೆ ರಾತ್ರಿ 12 ಗಂಟೆಗೆ ನಮ್ಮ ಹೆಣ್ಣು ಮಕ್ಕಳು ನಿರ್ಭಯದಿಂದ ಓಡಾಡುವಂತಾಗಬೇಕಾಗಿದೆ ಎಂದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…