ರಾಜ್ಯ

ವಿದ್ಯಾವಂತರೇ ಹೆಚ್ಚಾಗಿ ಕರ್ಮ‌ ಸಿದ್ಧಾಂತ ಪಾಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು.

ಅಂಬೇಡ್ಕರ್ ಮತ್ತು ಮಹಾತ್ಮಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.

ಬಸವಣ್ಣ ತಿರಸ್ಕರಿದ್ದ ಕರ್ಮಸಿದ್ಧಾಂತವನ್ನು ಪಾಲಿಸುವವರು ಈಗ ಹೆಚ್ಚಾಗಿದ್ದಾರೆ. ಈ ಮೌಡ್ಯ ಆಚರಿಸುವವರೆಲ್ಲಾ ವಿದ್ಯಾವಂತರೇ ಎನ್ನುವುದು ಬೇಸರದ ಸಂಗತಿ. ಆದ್ದರಿಂದ ವೈಚಾರಿಕತೆ ಇರುವ ವೈಜ್ಞಾನಿಕ ಶಿಕ್ಷಣ ಪದ್ಧತಿ ಅಗತ್ಯ. ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು ಎಂದರು.

ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದ್ದೇವೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದರು.

ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌ ಎಂದರು.

ಆಂದೋಲನ ಡೆಸ್ಕ್

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

3 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

6 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

6 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

7 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

7 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

7 hours ago