ರಾಜ್ಯ

ವಿದ್ಯಾವಂತರು ಮಾನವೀಯತೆಯ ಗುಣ ರೂಢಿಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ

ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು: ಸಿಎಂ

ಬೆಂಗಳೂರು: ಅಸಮಾನತೆಯನ್ನು ಹೋಗಲಾಡಿಸಿ , ಸಮಸಮಾಜದ ನಿರ್ಮಿಸಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಡಾ. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ಒಳಾಂಗಣ ಕ್ರೀಡಾ ಸಂಕಿರ್ಣ ದಲ್ಲಿ ಆಯೋಜಿಸಲಾಗಿದ್ದ ನೂತನ ಒಳಾಂಗಣ ಕ್ರೀಡಾ ಸಂಕೀರ್ಣ ಹಾಗೂ ಮೊದಲನೇಯ ವರ್ಷದ ಬಿ. ಇ. ತರಗತಿಗಳ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ಹಿಂದೆ ನಮ್ಮ ಸಮಾಜದಲ್ಲಿ, ಶೋಷಿತ ವರ್ಗದ ಜನರು ಶಿಕ್ಷಣದಿಂದ ವಂಚಿತರಾಗಿದ್ದು, ಅಂಬೇಡ್ಕರ್ ರವರ ಪರಿಶ್ರಮದಿಂದ ಅವರಿಗೆ ಉಚಿತ ಶಿಕ್ಷಣ ಸೌಲಭ್ಯ ನೀಡಲಾಗುತ್ತಿತ್ತು. ಶೋಷಿತವರ್ಗದವರಿಗೆ ನ್ಯಾಯ ಒದಗಿಸಿ ಸಮಸಮಾಜ ನಿರ್ಮಿಸಬೇಕೆಂಬ ಗುರಿಯೊಂದಿಗೆ ಅಂಬೇಡ್ಕರ್ ರವರು ಹೋರಾಡಿದರು. ಬಾಬಾಸಾಹೇಬ್ ಅಂಬೇಡ್ಕರ್ ಭಾರತ ಕಂಡ ಮಹಾನ್ ಮೇಧಾವಿ. ಅಂಬೇಡ್ಕರ್ ರವರ ರಚಿಸಿದ ಸಂವಿಧಾನದ ಆಶಯ ಹಾಗೂ ಜನರಿಗೆ ನೀಡುವ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಓದಬೇಕೆಂದು ಸರ್ಕಾರ ತಿಳಿಸಿದೆ ಎಂದರು.

ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆಯಿದೆ

ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ , ಅಸಮಾನತೆಯಿದೆ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಲು ಸಾಧ್ಯ. ಬುದ್ಧ, ಬಸವಾದಿ ಶರಣರು, ಮಹಾತ್ಮ ಗಾಂಧೀಜಿಯವರ ಸಮಾನ ಸಮಾಜದ ಕನಸು ಈಡೇರಬೇಕಿದೆ. ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.

ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು

ವೈಚಾರಿಕ ಶಿಕ್ಷಣದಿಂದ ಅಸಮಾನತೆ ಹೋಗಲಾಡಿಸಬಹುದು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು. ಇದಕ್ಕೆ ಪ್ರಚೋದನೆ ನೀಡುವಂತಹವರು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಅಂತಹವರಿಂದ ನಮ್ಮ ಸಂವಿಧಾನವನ್ನು ರಕ್ಷಿಸಿಕೊಳ್ಳಬೇಕು ಎಂದರು.

ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿಗೆ ಒತ್ತು

ಅಂಬೇಡ್ಕರ್ ಅವರ ತತ್ವಾದರ್ಶಗಳ ಹಾದಿಯಲ್ಲಿ ನಡೆದು ಜಯಪ್ರಕಾಶ್ ನಾರಾಯಣ ಅವರು 1980 ರಲ್ಲಿ ಡಾ II ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯವನ್ನು ಪ್ರಾರಂಭಿಸಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಡಾ.ಅಂಬೇಡ್ಕರ್ ರವರ ಮೂಲಮಂತ್ರವಾಗಿದ್ದ ಶಿಕ್ಷಣ, ಸಂಘಟನೆ , ಹೋರಾಟಗಳ ಆದರ್ಶಗಳನ್ನು ಪಾಲಿಸಬೇಕಾದ್ದು ವಿದ್ಯಾರ್ಥಿಗಳ ಕರ್ತವ್ಯವಾಗಿದ್ದು, ಸಮಾಜದ ಬದಲಾವಣೆಗೆ ಶ್ರಮಿಸಬೇಕು ಎಂದರು. ಪ್ರತಿ ವರ್ಷ ಇಂಜಿನಿಯರಿಂಗ್ ಪದವಿ ಪಡೆಯುವ ವಿದ್ಯಾರ್ಥಿಗಳಲ್ಲಿ ಕೇವಲ ಶೇ.15 ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತಿದೆ. ಕೈಗಾರಿಕೆಗಳಲ್ಲಿ ಹಾಗೂ ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಬೇಡಿಕೆಯಿರುವ ವಿಷಯಗಳಿಗೆ ಮಹತ್ವ ನೀಡಬೇಕು. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಕೌಶಲ್ಯಾಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿಯ ತರಬೇತಿ ನೀಡಿದರೆ,ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

5 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

8 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

11 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

15 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

15 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

15 hours ago