ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು: ಸಿಎಂ
ಬೆಂಗಳೂರು: ಅಸಮಾನತೆಯನ್ನು ಹೋಗಲಾಡಿಸಿ , ಸಮಸಮಾಜದ ನಿರ್ಮಿಸಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಡಾ. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ಒಳಾಂಗಣ ಕ್ರೀಡಾ ಸಂಕಿರ್ಣ ದಲ್ಲಿ ಆಯೋಜಿಸಲಾಗಿದ್ದ ನೂತನ ಒಳಾಂಗಣ ಕ್ರೀಡಾ ಸಂಕೀರ್ಣ ಹಾಗೂ ಮೊದಲನೇಯ ವರ್ಷದ ಬಿ. ಇ. ತರಗತಿಗಳ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ಹಿಂದೆ ನಮ್ಮ ಸಮಾಜದಲ್ಲಿ, ಶೋಷಿತ ವರ್ಗದ ಜನರು ಶಿಕ್ಷಣದಿಂದ ವಂಚಿತರಾಗಿದ್ದು, ಅಂಬೇಡ್ಕರ್ ರವರ ಪರಿಶ್ರಮದಿಂದ ಅವರಿಗೆ ಉಚಿತ ಶಿಕ್ಷಣ ಸೌಲಭ್ಯ ನೀಡಲಾಗುತ್ತಿತ್ತು. ಶೋಷಿತವರ್ಗದವರಿಗೆ ನ್ಯಾಯ ಒದಗಿಸಿ ಸಮಸಮಾಜ ನಿರ್ಮಿಸಬೇಕೆಂಬ ಗುರಿಯೊಂದಿಗೆ ಅಂಬೇಡ್ಕರ್ ರವರು ಹೋರಾಡಿದರು. ಬಾಬಾಸಾಹೇಬ್ ಅಂಬೇಡ್ಕರ್ ಭಾರತ ಕಂಡ ಮಹಾನ್ ಮೇಧಾವಿ. ಅಂಬೇಡ್ಕರ್ ರವರ ರಚಿಸಿದ ಸಂವಿಧಾನದ ಆಶಯ ಹಾಗೂ ಜನರಿಗೆ ನೀಡುವ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಓದಬೇಕೆಂದು ಸರ್ಕಾರ ತಿಳಿಸಿದೆ ಎಂದರು.
ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆಯಿದೆ
ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ , ಅಸಮಾನತೆಯಿದೆ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಲು ಸಾಧ್ಯ. ಬುದ್ಧ, ಬಸವಾದಿ ಶರಣರು, ಮಹಾತ್ಮ ಗಾಂಧೀಜಿಯವರ ಸಮಾನ ಸಮಾಜದ ಕನಸು ಈಡೇರಬೇಕಿದೆ. ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.
ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು
ವೈಚಾರಿಕ ಶಿಕ್ಷಣದಿಂದ ಅಸಮಾನತೆ ಹೋಗಲಾಡಿಸಬಹುದು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು. ಇದಕ್ಕೆ ಪ್ರಚೋದನೆ ನೀಡುವಂತಹವರು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಅಂತಹವರಿಂದ ನಮ್ಮ ಸಂವಿಧಾನವನ್ನು ರಕ್ಷಿಸಿಕೊಳ್ಳಬೇಕು ಎಂದರು.
ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿಗೆ ಒತ್ತು
ಅಂಬೇಡ್ಕರ್ ಅವರ ತತ್ವಾದರ್ಶಗಳ ಹಾದಿಯಲ್ಲಿ ನಡೆದು ಜಯಪ್ರಕಾಶ್ ನಾರಾಯಣ ಅವರು 1980 ರಲ್ಲಿ ಡಾ II ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯವನ್ನು ಪ್ರಾರಂಭಿಸಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಡಾ.ಅಂಬೇಡ್ಕರ್ ರವರ ಮೂಲಮಂತ್ರವಾಗಿದ್ದ ಶಿಕ್ಷಣ, ಸಂಘಟನೆ , ಹೋರಾಟಗಳ ಆದರ್ಶಗಳನ್ನು ಪಾಲಿಸಬೇಕಾದ್ದು ವಿದ್ಯಾರ್ಥಿಗಳ ಕರ್ತವ್ಯವಾಗಿದ್ದು, ಸಮಾಜದ ಬದಲಾವಣೆಗೆ ಶ್ರಮಿಸಬೇಕು ಎಂದರು. ಪ್ರತಿ ವರ್ಷ ಇಂಜಿನಿಯರಿಂಗ್ ಪದವಿ ಪಡೆಯುವ ವಿದ್ಯಾರ್ಥಿಗಳಲ್ಲಿ ಕೇವಲ ಶೇ.15 ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತಿದೆ. ಕೈಗಾರಿಕೆಗಳಲ್ಲಿ ಹಾಗೂ ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಬೇಡಿಕೆಯಿರುವ ವಿಷಯಗಳಿಗೆ ಮಹತ್ವ ನೀಡಬೇಕು. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಕೌಶಲ್ಯಾಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿಯ ತರಬೇತಿ ನೀಡಿದರೆ,ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದರು.
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…