Categories: ರಾಜ್ಯ

ವಿದ್ಯಾಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ; ತುಂಬಿದ ಸಭೆಯಲ್ಲಿ ಮಧು ಬಂಗಾರಪ್ಪಗೆ ಮುಜುಗರ

ಬೆಂಗಳೂರು: ಪ್ರಾಥಮಿಕ-ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡುತ್ತಿದ್ದಾಗ ವಿದ್ಯಾರ್ಥಿಯೊಬ್ಬ `ಏ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲʼ ಎಂದು ಹೇಳಿದ್ದಾನೆ. ಇದರಿಂದ ಶಿಕ್ಷಣ ಸಚಿವರಿಗೆ ತುಂಬಿದ ಸಭೆಯಲ್ಲಿ ಭಾರಿ ಮುಜುಗರ ಉಂಟಾಗಿದೆ.

ವಿಧಾನಸೌಧದಲ್ಲಿ ಇಂದು(ನ.20) ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮುಖಾಂತರ ನೀಟ್‌, ಜೆಇಇ ಮತ್ತು ಸಿಇಟಿಯ ಉಚಿತ ಕೋಚಿಂಗ್‌ ತರಬೇತಿ ನೀಡುವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಜೊತೆಗೆ ವಿದ್ಯಾರ್ಥಿಗಳು ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಸಂವಾದ ನಡೆಸುತ್ತಿದ್ದರು. ಆ ವೇಳೆ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದು ನೇರವಾಗಿ ಹೇಳಿದ್ದಾನೆ. ಆ ಮಾತು ಎಲ್ಲರಿಗೂ ಸ್ಪಷ್ಟವಾಗಿ ತಿಳಿದಿದೆ. ಎಲ್ಲರೂ ಒಂದು ಕ್ಷಣ ನಕ್ಕಿದ್ದಾರೆ. ವಿದ್ಯಾರ್ಥಿಯ ಮಾತನ್ನ ಗಂಭೀರವಾಗಿ ತೆಗೆದುಕೊಂಡ ಮಧು ಬಂಗಾರಪ್ಪ ಕೋಪಗೊಂಡು ಕ್ರಮಕ್ಕೆ ಸೂಚಿಸಿದ್ದಾರೆ.

ಕೋಪಗೊಂಡ ಮಧು ಬಂಗಾರಪ್ಪ ಯಾರೋ ಅದು ಹೇಳಿದ್ದು, ಏನೆಂದೂ ಹೇಳಿದ್ದು? ನಾನೇನು ಉರ್ದು ಮಾತನಾಡಿದ್ದ? ಕನ್ನಡದಲ್ಲೇ ತಾನೇ ಮಾತನಾಡಿದ್ದು ಎಂದು ಕಿಡಿಕಾರಿದ್ದಾರೆ. ಬಳಿಕ ಸಚಿವರ ಪಕ್ಕದಲ್ಲೇ ಇದ್ದ ಪದವಿ ಪೂರ್ವ ಕಾಲೇಜು ನಿರ್ದೇಶಕಿ ಸಿಂಧೂ ಬಿ.ರೂಪೇಶ್‌ ಹಾಗೂ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಯಾರು ನೋಡಿ ರೆಕಾರ್ಡ್‌ ಮಾಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ತಿಳಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

4 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

13 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

13 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

13 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

16 hours ago