ರಾಜ್ಯ

ರಾಜ್ಯದಲ್ಲಿ ಕೃಷಿಕರ ಏಳಿಗೆಗಾಗಿ ಕೃಷಿ ಯಾಂತ್ರಿಕರಣ ಯೋಜನೆ ಪರಿಣಾಮಕಾರಿಯಾಗಿ ಜಾರಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಳಗಾವಿ : ರಾಜ್ಯದಲ್ಲಿ ಎಲ್ಲಾ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆ ಮೂಲಕ ಸಹಾಯಧನದಡಿಯಲ್ಲಿ ಒದಗಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ನೀಲಪ್ಪ ಶಿವಣ್ಣನವರ್ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ವಿಧಾನಸಭೆಯಲ್ಲಿಂದು ಉತ್ತರಿಸಿದ ಕೃಷಿ ಸಚಿವರು, ಕೃಷಿ ಸಲಕರಣೆ ಮತ್ತು ಯಂತ್ರೋಪಕರಣಗಳಿಗೆ ರೈತರಿಂದ ಹೆಚ್ಚಿನ ಬೇಡಿಕೆ ಬರುತ್ತಿದ್ದು, 2025- 26 ನೇ ಸಾಲಿನಲ್ಲಿ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಡಿ ಒದಗಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ 428 ಕೋಟಿ ಅನುದಾನ ಮೀಸಲಿಟ್ಟಿದ್ದು, ಇಲ್ಲಿಯವರೆಗೆ 320 ಕೋಟಿ ಅನುದಾನವನ್ನು ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿದ್ದು, 271 ಕೋಟಿ ವೆಚ್ಚದಲ್ಲಿ 69722 ರೈತರಿಗೆ ಸಹಾಯಧನ ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದರು..

ಇದನ್ನು ಓದಿ: ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ : ತಗಡೂರು ವಸತಿ ಶಾಲೆಯ ವಿದ್ಯಾರ್ಥಿ ಆಯ್ಕೆ

ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು, ಕೃಷಿ ಕಾರ್ಮಿಕರ ಸಮಸ್ಯೆಯನ್ನು ನೀಗಿಸಿ, ಶ್ರಮದಾಯಕ ದುಡಿಮೆಯನ್ನು ತಗ್ಗಿಸಿ, ಹೆಚ್ಚಿನ ಇಳುವರಿ ಪಡೆಯಲು ರೈತರಿಗೆ ಕೃಷಿ ಯಂತ್ರೋಪಕರಣಗಳು ಸಹಕಾರಿಯಾಗುತ್ತಿದೆ ಎಂದು ಸಚಿವರು ಹೇಳಿದರು..

ಕೃಷಿ ಯಾಂತ್ರಿಕರಣ ಕಾರ್ಯಕ್ರಮವು ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ಒದಗಿಸಿದ ಅನುದಾನ ಮತ್ತು ರಾಜ್ಯವಲಯದ ಯೋಜನೆಗಳಡಿ ಒದಗಿಸಿದ ಅನುದಾನವನ್ನು ಸಮನ್ವಯಗೊಳಿಸಿ ಅತ್ಯುತ್ತಮ ವಾಗಿ ಕೃಷಿ ಯಾಂತ್ರಿಕರಣ ಯೋಜನೆ ಅನುಷ್ಟಾನಗೊಳಿಸಲಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು..

ಕೃಷಿ ಯಾಂತ್ರಿಕರಣ ಯೋಜನೆಯಡಿ ಸಾಮಾನ್ಯ ರೈತರಿಗೆ ಶೇ 50 ರಷ್ಟು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90 ಗರಿಷ್ಠ ರೂ. 1 ಲಕ್ಷದ ಮೀತಿಯೊಳಗೆ ಸಹಾಯಧನವನ್ನು ನೀಡಲಾಗುತ್ತಿದೆ.
ಟ್ರಾಕ್ಟರ್ ಗಳಿಗೆ (45 HP) ಸಾಮನ್ಯ ರೈತರಿಗೆ ರೂ. 0.75 ಲಕ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90 ರ ಗರಿಷ್ಠ ರೂ. 3 ಲಕ್ಷ ಸಹಾಯಧನ ನೀಡಲಾಗುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿಯವರು ತಿಳಿಸಿದರು..

ಆಂದೋಲನ ಡೆಸ್ಕ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

2 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

6 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

7 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

7 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

7 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

8 hours ago