ರಾಜ್ಯ

ರಾಜ್ಯದಲ್ಲಿ ಕೃಷಿಕರ ಏಳಿಗೆಗಾಗಿ ಕೃಷಿ ಯಾಂತ್ರಿಕರಣ ಯೋಜನೆ ಪರಿಣಾಮಕಾರಿಯಾಗಿ ಜಾರಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಳಗಾವಿ : ರಾಜ್ಯದಲ್ಲಿ ಎಲ್ಲಾ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆ ಮೂಲಕ ಸಹಾಯಧನದಡಿಯಲ್ಲಿ ಒದಗಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ನೀಲಪ್ಪ ಶಿವಣ್ಣನವರ್ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ವಿಧಾನಸಭೆಯಲ್ಲಿಂದು ಉತ್ತರಿಸಿದ ಕೃಷಿ ಸಚಿವರು, ಕೃಷಿ ಸಲಕರಣೆ ಮತ್ತು ಯಂತ್ರೋಪಕರಣಗಳಿಗೆ ರೈತರಿಂದ ಹೆಚ್ಚಿನ ಬೇಡಿಕೆ ಬರುತ್ತಿದ್ದು, 2025- 26 ನೇ ಸಾಲಿನಲ್ಲಿ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಡಿ ಒದಗಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ 428 ಕೋಟಿ ಅನುದಾನ ಮೀಸಲಿಟ್ಟಿದ್ದು, ಇಲ್ಲಿಯವರೆಗೆ 320 ಕೋಟಿ ಅನುದಾನವನ್ನು ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿದ್ದು, 271 ಕೋಟಿ ವೆಚ್ಚದಲ್ಲಿ 69722 ರೈತರಿಗೆ ಸಹಾಯಧನ ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದರು..

ಇದನ್ನು ಓದಿ: ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ : ತಗಡೂರು ವಸತಿ ಶಾಲೆಯ ವಿದ್ಯಾರ್ಥಿ ಆಯ್ಕೆ

ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು, ಕೃಷಿ ಕಾರ್ಮಿಕರ ಸಮಸ್ಯೆಯನ್ನು ನೀಗಿಸಿ, ಶ್ರಮದಾಯಕ ದುಡಿಮೆಯನ್ನು ತಗ್ಗಿಸಿ, ಹೆಚ್ಚಿನ ಇಳುವರಿ ಪಡೆಯಲು ರೈತರಿಗೆ ಕೃಷಿ ಯಂತ್ರೋಪಕರಣಗಳು ಸಹಕಾರಿಯಾಗುತ್ತಿದೆ ಎಂದು ಸಚಿವರು ಹೇಳಿದರು..

ಕೃಷಿ ಯಾಂತ್ರಿಕರಣ ಕಾರ್ಯಕ್ರಮವು ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ಒದಗಿಸಿದ ಅನುದಾನ ಮತ್ತು ರಾಜ್ಯವಲಯದ ಯೋಜನೆಗಳಡಿ ಒದಗಿಸಿದ ಅನುದಾನವನ್ನು ಸಮನ್ವಯಗೊಳಿಸಿ ಅತ್ಯುತ್ತಮ ವಾಗಿ ಕೃಷಿ ಯಾಂತ್ರಿಕರಣ ಯೋಜನೆ ಅನುಷ್ಟಾನಗೊಳಿಸಲಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು..

ಕೃಷಿ ಯಾಂತ್ರಿಕರಣ ಯೋಜನೆಯಡಿ ಸಾಮಾನ್ಯ ರೈತರಿಗೆ ಶೇ 50 ರಷ್ಟು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90 ಗರಿಷ್ಠ ರೂ. 1 ಲಕ್ಷದ ಮೀತಿಯೊಳಗೆ ಸಹಾಯಧನವನ್ನು ನೀಡಲಾಗುತ್ತಿದೆ.
ಟ್ರಾಕ್ಟರ್ ಗಳಿಗೆ (45 HP) ಸಾಮನ್ಯ ರೈತರಿಗೆ ರೂ. 0.75 ಲಕ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90 ರ ಗರಿಷ್ಠ ರೂ. 3 ಲಕ್ಷ ಸಹಾಯಧನ ನೀಡಲಾಗುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿಯವರು ತಿಳಿಸಿದರು..

ಆಂದೋಲನ ಡೆಸ್ಕ್

Recent Posts

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

38 mins ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

47 mins ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

2 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

4 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

4 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

8 hours ago