ರಾಜ್ಯ

ರಾಜ್ಯದಲ್ಲಿ ಕೃಷಿಕರ ಏಳಿಗೆಗಾಗಿ ಕೃಷಿ ಯಾಂತ್ರಿಕರಣ ಯೋಜನೆ ಪರಿಣಾಮಕಾರಿಯಾಗಿ ಜಾರಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಳಗಾವಿ : ರಾಜ್ಯದಲ್ಲಿ ಎಲ್ಲಾ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆ ಮೂಲಕ ಸಹಾಯಧನದಡಿಯಲ್ಲಿ ಒದಗಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ನೀಲಪ್ಪ ಶಿವಣ್ಣನವರ್ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ವಿಧಾನಸಭೆಯಲ್ಲಿಂದು ಉತ್ತರಿಸಿದ ಕೃಷಿ ಸಚಿವರು, ಕೃಷಿ ಸಲಕರಣೆ ಮತ್ತು ಯಂತ್ರೋಪಕರಣಗಳಿಗೆ ರೈತರಿಂದ ಹೆಚ್ಚಿನ ಬೇಡಿಕೆ ಬರುತ್ತಿದ್ದು, 2025- 26 ನೇ ಸಾಲಿನಲ್ಲಿ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಡಿ ಒದಗಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ 428 ಕೋಟಿ ಅನುದಾನ ಮೀಸಲಿಟ್ಟಿದ್ದು, ಇಲ್ಲಿಯವರೆಗೆ 320 ಕೋಟಿ ಅನುದಾನವನ್ನು ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿದ್ದು, 271 ಕೋಟಿ ವೆಚ್ಚದಲ್ಲಿ 69722 ರೈತರಿಗೆ ಸಹಾಯಧನ ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದರು..

ಇದನ್ನು ಓದಿ: ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ : ತಗಡೂರು ವಸತಿ ಶಾಲೆಯ ವಿದ್ಯಾರ್ಥಿ ಆಯ್ಕೆ

ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು, ಕೃಷಿ ಕಾರ್ಮಿಕರ ಸಮಸ್ಯೆಯನ್ನು ನೀಗಿಸಿ, ಶ್ರಮದಾಯಕ ದುಡಿಮೆಯನ್ನು ತಗ್ಗಿಸಿ, ಹೆಚ್ಚಿನ ಇಳುವರಿ ಪಡೆಯಲು ರೈತರಿಗೆ ಕೃಷಿ ಯಂತ್ರೋಪಕರಣಗಳು ಸಹಕಾರಿಯಾಗುತ್ತಿದೆ ಎಂದು ಸಚಿವರು ಹೇಳಿದರು..

ಕೃಷಿ ಯಾಂತ್ರಿಕರಣ ಕಾರ್ಯಕ್ರಮವು ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ಒದಗಿಸಿದ ಅನುದಾನ ಮತ್ತು ರಾಜ್ಯವಲಯದ ಯೋಜನೆಗಳಡಿ ಒದಗಿಸಿದ ಅನುದಾನವನ್ನು ಸಮನ್ವಯಗೊಳಿಸಿ ಅತ್ಯುತ್ತಮ ವಾಗಿ ಕೃಷಿ ಯಾಂತ್ರಿಕರಣ ಯೋಜನೆ ಅನುಷ್ಟಾನಗೊಳಿಸಲಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು..

ಕೃಷಿ ಯಾಂತ್ರಿಕರಣ ಯೋಜನೆಯಡಿ ಸಾಮಾನ್ಯ ರೈತರಿಗೆ ಶೇ 50 ರಷ್ಟು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90 ಗರಿಷ್ಠ ರೂ. 1 ಲಕ್ಷದ ಮೀತಿಯೊಳಗೆ ಸಹಾಯಧನವನ್ನು ನೀಡಲಾಗುತ್ತಿದೆ.
ಟ್ರಾಕ್ಟರ್ ಗಳಿಗೆ (45 HP) ಸಾಮನ್ಯ ರೈತರಿಗೆ ರೂ. 0.75 ಲಕ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90 ರ ಗರಿಷ್ಠ ರೂ. 3 ಲಕ್ಷ ಸಹಾಯಧನ ನೀಡಲಾಗುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿಯವರು ತಿಳಿಸಿದರು..

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

12 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

12 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

14 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

14 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

14 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

22 hours ago