ಬೆಂಗಳೂರು: ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಒಂಬತ್ತು ಚಾರಣಿಗರು ಸಾವನ್ನಪ್ಪಿದ್ದು, ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಉಳಿದ ಚಾರಣಿಗರನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರ ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮೃತರಿಗೆ ಸಂತಾಪ ಸೂಚಿಸಿ, ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.
ಮೃತರ ಸಂಖ್ಯೆ 9 ಕ್ಕೆ ಏರಿದ ಸಂಗತಿ ತಿಳಿದು ಬಹಳ ನೋವಾಗಿದೆ. ರಕ್ಷಿಸಲ್ಪಟ್ಟಿರುವ ಎಲ್ಲರನ್ನೂ ಯಾವುದೇ ಅಡಚಣೆ ಆಗದಂತೆ ಸುರಕ್ಷಿತವಾಗಿ ಮನೆಗಳಿಗೆ ಸೇರಿಸಬೇಕು. ಮೃತ ದೇಹಗಳನ್ನು ಕುಟುಂಬದವರಿಗೆ ತಲುಪಿಸುವ ನಿಟ್ಟಿನಲ್ಲೂ ಅಗತ್ಯವಾದ ಎಲ್ಲಾ ಪ್ರಕ್ರಿಯೆಗಳನ್ನು ತುರ್ತಾಗಿ ನಿರ್ವಹಿಸಬೇಕು ಎಂದು ಘಟನಾ ಸ್ಥಳದಲ್ಲಿರುವ ಸಚಿವ ಕೃಷ್ಣಬೈರೇಗೌಡರಿಗೆ ಸೂಚನೆ ನೀಡಿದ್ದೇನೆ.
ಬಾಕಿ ಉಳಿದಿರುವ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕಾಪಾಡಿ ಕರೆತರುವ ಬಗ್ಗೆ ಸರ್ಕಾರಗಳ ಮಟ್ಟದಲ್ಲಿ ಸಕಲ ಪ್ರಯತ್ನಗಳೂ ನಡೆಯುತ್ತಿವೆ ಎಂದು ಭರವಸೆ ನೀಡಿದ್ದಾರೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆ ಮೂಲಕ ರಕ್ಷಿಸಲ್ಪಟ್ಟವರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ತಮ್ಮ ಗುಡಿಗೆ ಸೇರಿಸಲಾಗುವುದು ಎಂದು ಬರೆದುಕೊಂಡಿದ್ದಾರೆ.
ನವದೆಹಲಿ : ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ಜೆಂಡರ್) ಹಕ್ಕುಗಳ ರಕ್ಷಣೆ ಕುರಿತ-2019ರ…
ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ…
ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…
ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…
ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…
ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…