ರಾಜ್ಯ

ಚಾರಣಿಗರ ರಕ್ಷಣೆಗೆ ಶಕ್ತಿ ಮೀರಿ ಪ್ರಯತ್ನ: ಸಿದ್ದರಾಮಯ್ಯ

ಬೆಂಗಳೂರು: ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಒಂಬತ್ತು ಚಾರಣಿಗರು ಸಾವನ್ನಪ್ಪಿದ್ದು, ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಉಳಿದ ಚಾರಣಿಗರನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರ ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮೃತರಿಗೆ ಸಂತಾಪ ಸೂಚಿಸಿ, ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.

ಮೃತರ ಸಂಖ್ಯೆ 9 ಕ್ಕೆ ಏರಿದ ಸಂಗತಿ ತಿಳಿದು ಬಹಳ ನೋವಾಗಿದೆ. ರಕ್ಷಿಸಲ್ಪಟ್ಟಿರುವ ಎಲ್ಲರನ್ನೂ ಯಾವುದೇ ಅಡಚಣೆ ಆಗದಂತೆ ಸುರಕ್ಷಿತವಾಗಿ ಮನೆಗಳಿಗೆ ಸೇರಿಸಬೇಕು. ಮೃತ ದೇಹಗಳನ್ನು ಕುಟುಂಬದವರಿಗೆ ತಲುಪಿಸುವ ನಿಟ್ಟಿನಲ್ಲೂ ಅಗತ್ಯವಾದ ಎಲ್ಲಾ ಪ್ರಕ್ರಿಯೆಗಳನ್ನು ತುರ್ತಾಗಿ ನಿರ್ವಹಿಸಬೇಕು ಎಂದು ಘಟನಾ ಸ್ಥಳದಲ್ಲಿರುವ ಸಚಿವ ಕೃಷ್ಣಬೈರೇಗೌಡರಿಗೆ ಸೂಚನೆ ನೀಡಿದ್ದೇನೆ.

ಬಾಕಿ ಉಳಿದಿರುವ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕಾಪಾಡಿ ಕರೆತರುವ ಬಗ್ಗೆ ಸರ್ಕಾರಗಳ ಮಟ್ಟದಲ್ಲಿ ಸಕಲ ಪ್ರಯತ್ನಗಳೂ ನಡೆಯುತ್ತಿವೆ ಎಂದು ಭರವಸೆ ನೀಡಿದ್ದಾರೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆ ಮೂಲಕ ರಕ್ಷಿಸಲ್ಪಟ್ಟವರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ತಮ್ಮ ಗುಡಿಗೆ ಸೇರಿಸಲಾಗುವುದು ಎಂದು ಬರೆದುಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

ನವದೆಹಲಿ : ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್‌ಜೆಂಡರ್) ಹಕ್ಕುಗಳ ರಕ್ಷಣೆ ಕುರಿತ-2019ರ…

6 mins ago

ಕೃಷಿ ಸಚಿವರ ಕಛೇರಿಯಲ್ಲಿ ಈ ವರ್ಷವೂ ಶೇ.100ರಷ್ಟು ಕಡತ ವಿಲೇವಾರಿ ಸಾಧನೆ

ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ…

1 hour ago

ಜನಗಣತಿ | ಲಿವ್‌-ಇನ್‌ ಸಂಬಂಧದಲ್ಲಿರುವವರ ಪರಿಗಣನೆ ಹೇಗೆ? ಕೇಂದ್ರ ಸರ್ಕಾರ ಹೇಳಿದ್ದೇನು?

ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…

1 hour ago

ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…

3 hours ago

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…

3 hours ago

ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್‌ಗೆ ನೆರವಾಗಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago