ರಾಜ್ಯ

ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡಿಸಲು ಪ್ರಯತ್ನಗಳು ನಡೆದಿವೆ: ಪರಮೇಶ್ವರ್‌

ಬೆಂಗಳೂರು : ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸದಾಶಿವ ಆಯೋಗದ ವರದಿಯನ್ನು ಬೆಳಗಾವಿಯ ಅಧಿವೇಶನದಲ್ಲಿ ಮಂಡಿಸಲು ಪ್ರಯತ್ನಗಳು ನಡೆದಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‍ನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಘಟಕದಿಂದ ಚಿತ್ರದುರ್ಗದಲ್ಲಿ ಸಮಾವೇಶ ನಡೆಸಿ ಹತ್ತು ಘೋಷಣೆಗಳನ್ನು ಮಾಡಲಾಯಿತು.

ಚಿತ್ರದುರ್ಗದ ಘೋಷಣೆಯ ಪ್ರಕಾರ ಕಾಂಗ್ರೆಸ್ ಸರ್ಕಾರ ಅಕಾರಕ್ಕೆ ಬಂದ ಬಳಿಕ ಮೊದಲ ಅವೇಶನದಲ್ಲೇ ಸದಾಶಿವ ಆಯೋಗದ ವರದಿಯನ್ನು ಮಂಡಿಸುವುದಾಗಿ ಭರವಸೆ ನೀಡಲಾಗಿತ್ತು. ಈಗ ನಾವು ಅಧಿಕಾರಕ್ಕೆ ಬಂದಿದ್ದೇವೆ. ಮೊದಲ ಅಧಿವೇಶನದಲ್ಲಿ ವರದಿ ಮಂಡಿಸಲಾಗಿಲ್ಲ. ಬೆಳಗಾವಿಯಲ್ಲಿ ನಡೆಯುತ್ತಿರುವ 2ನೇ ಅವೇಶನದಲ್ಲಿ ಮಂಡನೆ ಮಾಡಲು ಒತ್ತಡ ಹೇರುತ್ತಿದ್ದೇವೆ ಎಂದರು.

ಸಚಿವರಾದ ಕೆ.ಎಚ್.ಮುನಿಯಪ್ಪ, ಎಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಮತ್ತು ತಾವು ಮುಖ್ಯಮಂತ್ರಿಯರ ಜೊತೆ ಚರ್ಚೆ ನಡೆಸಿದ್ದು, ವರದಿ ಮಂಡನೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೇವೆ. ಇತರ ಸಮುದಾಯಗಳ ಮುಖಂಡರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

ವರದಿ ಮಂಡನೆಯಾಗಬೇಕು, ಚರ್ಚೆಯಾಗಬೇಕು ಎಂಬುದು ಎಲ್ಲರ ಒತ್ತಾಸೆ. ಆದರೆ ಅದಕ್ಕೂ ಮುನ್ನ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಖ್ಯಮಂತ್ರಿಯವರು, ಶಾಸಕರು, ಸಚಿವರು, ಮುಖಂಡರ ಜೊತೆ ಚರ್ಚೆ ಮಾಡಲಿದ್ದಾರೆ ಎಂದು ತಿಳಿಸಿದರು

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

7 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

20 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

20 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

20 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

20 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

20 hours ago