ರಾಜ್ಯ

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ

ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ ಕಟ್ಟಡ, ಆಸ್ಪತ್ರೆ, ಅಂಗನವಾಡಿ ಇತ್ಯಾದಿ ಇದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗಿರುವ ತಪ್ಪು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಕಾರ್ಕಳದಲ್ಲಿಂದು ವಲಯ ಅರಣ್ಯಾಧಿಕಾರಿಗಳ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರ ನೂತನ ಕಟ್ಟಡ ಉದ್ಘಾಟಿಸಿ, ಅರಣ್ಯ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಡೀಮ್ಡ್ ಅರಣ್ಯ ಸಮಸ್ಯೆ ಪರಿಹರಿಸಲು ಕೊನೆಯ ಅವಕಾಶ ದೊರೆತಿದ್ದು, ಸರ್ವೋನ್ನತ ನ್ಯಾಯಾಲಯಕ್ಕೆ ಮರು ಮನವಿ ಸಲ್ಲಿಸುವ ಸಲುವಾಗಿ ಜಿಲ್ಲಾ ಮಟ್ಟ ಮತ್ತು ರಾಜ್ಯಮಟ್ಟದಲ್ಲಿ ಸಮಿತಿ ರಚಿಸಲಾಗಿದೆ ಎಂದರು.

ಮೊದಲಿಗೆ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದಾಗ 9 ಲಕ್ಷ ಹೆಕ್ಟೇರ್ ಜಮೀನನ್ನು ಡೀಮ್ಡ್ ಎಂದು ಗುರುತಿಸಲಾಗಿತ್ತು, ನಂತರ 2022ರಲ್ಲಿ ಪ್ರಮಾಣಪತ್ರ ಸಲ್ಲಿಸಿದಾಗ 3 ಲಕ್ಷ 33 ಸಾವಿರ ಹೆಕ್ಟೇರ್ ಜಮೀನು ಎಂದು ಪರಿಷ್ಕರಿಸಲಾಯಿತು. ಆಗ ಸಮರ್ಪಕವಾಗಿ ಸರ್ವೆ ನಡೆಸದೆ, ಖುದ್ದು ಪರಿಶೀಲಿಸದ ಕಾರಣ ಸರ್ಕಾರಿ ಕಟ್ಟಡ, ಶಾಲೆ, ಆಸ್ಪತ್ರೆ, ಪಟ್ಟಾ ಭೂಮಿ ಸೇರಿದೆ. ಬಡ ಮತ್ತು ಮಧ್ಯಮ ವರ್ಗದ ಜನರು ಸಂಕಷ್ಟ ಎದುರಿಸುತ್ತಿದ್ದು, ಈ ಲೋಪ ಸರಿಪಡಿಸಬೇಕಾಗಿದೆ ಎಂದರು.

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಅರಣ್ಯ ಇಲಾಖೆಗೆ ದಂಡ ಮತ್ತು ಇತರ ಶುಲ್ಕವನ್ನು ಪಾವತಿಸಬೇಕಾಗಿದೆ. ಪ್ರಸ್ತುತ ಹೈಕೋರ್ಟ್ ಈ ಸಂಬಂಧ ನಿರ್ದೇಶನ ನೀಡಿದ್ದು, ನ್ಯಾಯಾಲಯದ ಆದೇಶದಂತೆ ಸರ್ಕಾರ ನಡೆಯಲಿದೆ ಎಂದರು.

ಇದೇ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿಗಳ ಕಚೇರಿಯ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು. ಇದಕ್ಕೂ ಮುನ್ನ ಕಟೀಲು ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ತೆರಳಿದ ಈಶ್ವರ ಖಂಡ್ರೆ ದೇವರ ದರ್ಶನ ಪಡೆದು, ರಾಜ್ಯದಲ್ಲಿ ಉತ್ತಮ, ಮಳೆ, ಬೆಳೆ, ಆಗಲಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಳನ್, ಕಮಲಾ ಕರಿಕಳನ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

39 mins ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

59 mins ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

1 hour ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

4 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

4 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

4 hours ago