ರಾಜ್ಯ

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ

ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ ಕಟ್ಟಡ, ಆಸ್ಪತ್ರೆ, ಅಂಗನವಾಡಿ ಇತ್ಯಾದಿ ಇದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗಿರುವ ತಪ್ಪು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಕಾರ್ಕಳದಲ್ಲಿಂದು ವಲಯ ಅರಣ್ಯಾಧಿಕಾರಿಗಳ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರ ನೂತನ ಕಟ್ಟಡ ಉದ್ಘಾಟಿಸಿ, ಅರಣ್ಯ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಡೀಮ್ಡ್ ಅರಣ್ಯ ಸಮಸ್ಯೆ ಪರಿಹರಿಸಲು ಕೊನೆಯ ಅವಕಾಶ ದೊರೆತಿದ್ದು, ಸರ್ವೋನ್ನತ ನ್ಯಾಯಾಲಯಕ್ಕೆ ಮರು ಮನವಿ ಸಲ್ಲಿಸುವ ಸಲುವಾಗಿ ಜಿಲ್ಲಾ ಮಟ್ಟ ಮತ್ತು ರಾಜ್ಯಮಟ್ಟದಲ್ಲಿ ಸಮಿತಿ ರಚಿಸಲಾಗಿದೆ ಎಂದರು.

ಮೊದಲಿಗೆ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದಾಗ 9 ಲಕ್ಷ ಹೆಕ್ಟೇರ್ ಜಮೀನನ್ನು ಡೀಮ್ಡ್ ಎಂದು ಗುರುತಿಸಲಾಗಿತ್ತು, ನಂತರ 2022ರಲ್ಲಿ ಪ್ರಮಾಣಪತ್ರ ಸಲ್ಲಿಸಿದಾಗ 3 ಲಕ್ಷ 33 ಸಾವಿರ ಹೆಕ್ಟೇರ್ ಜಮೀನು ಎಂದು ಪರಿಷ್ಕರಿಸಲಾಯಿತು. ಆಗ ಸಮರ್ಪಕವಾಗಿ ಸರ್ವೆ ನಡೆಸದೆ, ಖುದ್ದು ಪರಿಶೀಲಿಸದ ಕಾರಣ ಸರ್ಕಾರಿ ಕಟ್ಟಡ, ಶಾಲೆ, ಆಸ್ಪತ್ರೆ, ಪಟ್ಟಾ ಭೂಮಿ ಸೇರಿದೆ. ಬಡ ಮತ್ತು ಮಧ್ಯಮ ವರ್ಗದ ಜನರು ಸಂಕಷ್ಟ ಎದುರಿಸುತ್ತಿದ್ದು, ಈ ಲೋಪ ಸರಿಪಡಿಸಬೇಕಾಗಿದೆ ಎಂದರು.

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಅರಣ್ಯ ಇಲಾಖೆಗೆ ದಂಡ ಮತ್ತು ಇತರ ಶುಲ್ಕವನ್ನು ಪಾವತಿಸಬೇಕಾಗಿದೆ. ಪ್ರಸ್ತುತ ಹೈಕೋರ್ಟ್ ಈ ಸಂಬಂಧ ನಿರ್ದೇಶನ ನೀಡಿದ್ದು, ನ್ಯಾಯಾಲಯದ ಆದೇಶದಂತೆ ಸರ್ಕಾರ ನಡೆಯಲಿದೆ ಎಂದರು.

ಇದೇ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿಗಳ ಕಚೇರಿಯ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು. ಇದಕ್ಕೂ ಮುನ್ನ ಕಟೀಲು ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ತೆರಳಿದ ಈಶ್ವರ ಖಂಡ್ರೆ ದೇವರ ದರ್ಶನ ಪಡೆದು, ರಾಜ್ಯದಲ್ಲಿ ಉತ್ತಮ, ಮಳೆ, ಬೆಳೆ, ಆಗಲಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಳನ್, ಕಮಲಾ ಕರಿಕಳನ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 10 ಶುಕ್ರವಾರ

2 hours ago

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

22 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

23 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

23 hours ago