ರಾಜ್ಯ

ವೃದ್ಧರು, ವಯಸ್ಕರು ಕಾರ್ಬೆವಾಕ್ಸ್ ಬೂಸ್ಟರ್ ಡೋಸ್ ಪಡೆಯಬಹುದು: ರಾಜ್ಯ ಸರ್ಕಾರ

ಬೆಂಗಳೂರು: ಕಳೆದ ಆರು ತಿಂಗಳಲ್ಲಿ 18 ವರ್ಷ ತುಂಬಿದವರೂ ಸಹ ಬೂಸ್ಟರ್ ಡೋಸ್ ಅಥವಾ ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.  ವ60ರ್ಷ ಮೇಲ್ಪಟ್ಟವರು ಮತ್ತು ಸಹವರ್ತಿ ರೋಗಿಗಳಿಗೆ ಮಾತ್ರ ಬೂಸ್ಟರ್‌ ಡೋಸ್‌ ನೀಡಲಾಗುತ್ತಿದೆ. ಇದರ ಜೊತೆಗೆ ತಜ್ಞರು ಮತ್ತು ತಾಂತ್ರಿಕ ಸಮಿತಿ ಸದಸ್ಯರು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಬಹುದೆಂದು ಆರೋಗ್ಯ ಇಲಾಖೆ ಸೂಚಿಸಿದೆ.

ರಾಷ್ಟ್ರೀಯ ಆರೋಗ್ಯ ಮಿಷನ್‌ನ ವ್ಯವಸ್ಥಾಪಕ ನಿರ್ದೇಶಕ ನವೀನ್ ಭಟ್, 15ರಿಂದ 17 ವರ್ಷದೊಳಗಿನವರು ಮತ್ತು ಇತ್ತೀಚೆಗೆ 18 ವರ್ಷ ತುಂಬಿದವರು ಈ ಲಸಿಕೆಯನ್ನು ಮುನ್ನೆಚ್ಚರಿಕೆಯಾಗಿ ಲಸಿಕೆಯನ್ನು ಪಡೆಯಹುದಾಗಿದೆ.

18 ವರ್ಷ ಮೇಲ್ಪಟ್ಟವರಿಗೆ ಆದ್ಯತೆಯ ಮೇಲೆ ಲಸಿಕೆಯನ್ನು ನೀಡಬೇಕೆಂದು ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿಲ್ಲ. ಆದಾಗ್ಯೂ, ಬೂಸ್ಟರ್ ಡೋಸ್ ತೆಗೆದುಕೊಳ್ಳುವವರ ಸಂಖ್ಯೆಯು ಹೆಚ್ಚಾಗುತ್ತಿಲ್ಲ. ಸಂಗ್ರಹಿಸಲಾದ 30,000 ಬಾಟಲ್‌ ಗಳ ಮುಕ್ತಾಯ ದಿನಾಂಕ ಮಾರ್ಚ್ ಆಗಿರುವುದರಿಂದ, ಮುಂಬರುವ ದಿನಗಳಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆಯನ್ನು ನೀಡುವ ಬಗ್ಗೆ ನಾವು ನಿರ್ಧರಿಸುತ್ತೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿ ಹೇಳಿದರು.

ಹೆಸರು ಹೇಳಲು ಇಚ್ಛಿಸದ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, Corbevax ಲಸಿಕೆ ಸೂಕ್ತವಾಗಿದೆ. ಇದನ್ನು ಪ್ರಾಥಮಿಕ ಲಸಿಕೆಯಾಗಿಯೂ ಬಳಸಬಹುದು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು. ರಾಜ್ಯದಲ್ಲಿ ಲಸಿಕೆಗಳ ಕೊರತೆಯಿಂದಾಗಿ, ಇದನ್ನು ಶೇಕಡಾ 23ರಿಂದ 25ರಷ್ಟು ಜನಸಂಖ್ಯೆಗೆ ಸೀಮಿತಗೊಳಿಸುತ್ತಿದೆ ಎಂದರು.

ಇದನ್ನು ಫ್ಲೂ ಲಸಿಕೆಯಾಗಿಯೂ ಬಳಸಬಹುದು. ಐದು ವರ್ಷ ಮೇಲ್ಪಟ್ಟ ಮಕ್ಕಳಿಗೆ ಕಟ್ಟುನಿಟ್ಟಾದ ವೈದ್ಯರ ಮೇಲ್ವಿಚಾರಣೆಯಲ್ಲಿ ನೀಡುವುದು ಸುರಕ್ಷಿತವಾಗಿದೆ. ಇದು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ನಿಂದ ಅನುಮೋದಿತ ಲಸಿಕೆಯಾಗಿದೆ. ಆದರೆ ಇದೆಲ್ಲದರ ಹೊರತಾಗಿಯೂ, ರಾಷ್ಟ್ರೀಯ ಪ್ರತಿರಕ್ಷಣಾ ತಾಂತ್ರಿಕ ಸಲಹಾ ಗುಂಪು (NITG) ನಿರ್ಬಂಧಗಳನ್ನು ವಿಧಿಸಿದೆ. ಇದರ ಪ್ರತ್ಯಕ್ಷ ಮಾರಾಟವನ್ನೂ ನಿಲ್ಲಿಸಲಾಗಿದೆ. ಈ ಲಸಿಕೆಯನ್ನು ಎಲ್ಲರಿಗೂ ಪ್ರಾಥಮಿಕ ಲಸಿಕೆಯಾಗಿ ನೀಡಬಹುದು. ಇದು ಭಿನ್ನಜಾತಿಯ ಬೂಸ್ಟರ್ ಕೂಡ ಆಗಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹೇಳಿದರು.

andolanait

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

2 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

5 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

6 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

6 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

6 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

6 hours ago