ರಾಜ್ಯ

ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್:‌ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರು ನಿನ್ನೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ನೋಟಿಸ್‌ ಜಾರಿ ಮಾಡಿದ್ದು, ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲು ಸೂಚನೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದೆಲ್ಲವನ್ನು ಎಐಸಿಸಿ, ಪಿಸಿಸಿಯವರು ನೋಡಿಕೊಳ್ಳುತ್ತಾರೆ. ಪಿಸಿಸಿ ಅಧ್ಯಕ್ಷರ ಬಳಿಯೂ ದಾಖಲೆಗಳನ್ನು ಕೊಡುವಂತೆ ಚುನಾವಣಾ ಆಯೋಗ ಕೇಳಿದೆ. ರಾಹುಲ್‌ ಗಾಂಧಿ ಪಿಸಿಸಿ ಅಧ್ಯಕ್ಷರಿಗೆ ಎಲ್ಲಾ ಜವಾಬ್ದಾರಿ ಕೊಟ್ಟಿದ್ದಾರೆ. ಹಾಗಾಗಿ ಎಲ್ಲವನ್ನೂ ಅವರೇ ನೋಡಿಕೊಳ್ಳುತ್ತಾರೆ ಎಂದು ಹೇಳಿದರು.

ಇನ್ನು ಸಿದ್ದರಾಮಯ್ಯ ಕೂಡ ಮತ ಖರೀದಿ ಮಾಡಿ ಗೆದ್ದಿದ್ದಾರೆ ಎಂದು ಸಿ.ಎಂ.ಇಬ್ರಾಹಿಂ ಆರೋಪಿಸಿರುವ ವಿಚಾರವಾಗಿ ಮಾತನಾಡಿದ ಅವರು, ಚುನಾವಣಾ ಆಯೋಗ ಬೇರೆಯವರ ಪ್ರಶ್ನೆಗಳಿಗೆ ಉತ್ತರ ನೀಡುತ್ತದೆ. ಇಬ್ರಾಹಿಂ ಈ ಹಿಂದೆ ನಮ್ಮ ಪಕ್ಷದಲ್ಲಿ ಇದ್ದರು. ಅವರು ಏನು ಬೇಕಾದರೂ ಹೇಳುತ್ತಾರೆ. ಜನಾಕರ್ಷಣೆ ಹೇಗೆ ಎಂಬುದು ಎಲ್ಲರಿಗೂ ಗೊತ್ತಿದೆ. ಹಾಗಾಗಿ ಅವರು ಜನಾಕರ್ಷಣೆಗಾಗಿ ಹೇಳಿಕೆ ಕೊಡುತ್ತಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

31 mins ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

37 mins ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

41 mins ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

45 mins ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

12 hours ago