rahul gandhi
ಬೆಂಗಳೂರು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರು ನಿನ್ನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದ್ದು, ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲು ಸೂಚನೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದೆಲ್ಲವನ್ನು ಎಐಸಿಸಿ, ಪಿಸಿಸಿಯವರು ನೋಡಿಕೊಳ್ಳುತ್ತಾರೆ. ಪಿಸಿಸಿ ಅಧ್ಯಕ್ಷರ ಬಳಿಯೂ ದಾಖಲೆಗಳನ್ನು ಕೊಡುವಂತೆ ಚುನಾವಣಾ ಆಯೋಗ ಕೇಳಿದೆ. ರಾಹುಲ್ ಗಾಂಧಿ ಪಿಸಿಸಿ ಅಧ್ಯಕ್ಷರಿಗೆ ಎಲ್ಲಾ ಜವಾಬ್ದಾರಿ ಕೊಟ್ಟಿದ್ದಾರೆ. ಹಾಗಾಗಿ ಎಲ್ಲವನ್ನೂ ಅವರೇ ನೋಡಿಕೊಳ್ಳುತ್ತಾರೆ ಎಂದು ಹೇಳಿದರು.
ಇನ್ನು ಸಿದ್ದರಾಮಯ್ಯ ಕೂಡ ಮತ ಖರೀದಿ ಮಾಡಿ ಗೆದ್ದಿದ್ದಾರೆ ಎಂದು ಸಿ.ಎಂ.ಇಬ್ರಾಹಿಂ ಆರೋಪಿಸಿರುವ ವಿಚಾರವಾಗಿ ಮಾತನಾಡಿದ ಅವರು, ಚುನಾವಣಾ ಆಯೋಗ ಬೇರೆಯವರ ಪ್ರಶ್ನೆಗಳಿಗೆ ಉತ್ತರ ನೀಡುತ್ತದೆ. ಇಬ್ರಾಹಿಂ ಈ ಹಿಂದೆ ನಮ್ಮ ಪಕ್ಷದಲ್ಲಿ ಇದ್ದರು. ಅವರು ಏನು ಬೇಕಾದರೂ ಹೇಳುತ್ತಾರೆ. ಜನಾಕರ್ಷಣೆ ಹೇಗೆ ಎಂಬುದು ಎಲ್ಲರಿಗೂ ಗೊತ್ತಿದೆ. ಹಾಗಾಗಿ ಅವರು ಜನಾಕರ್ಷಣೆಗಾಗಿ ಹೇಳಿಕೆ ಕೊಡುತ್ತಾರೆ ಎಂದು ಹೇಳಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…