ರಾಜ್ಯ

ಅಕ್ರಮ ಮದ್ಯ ಹುಡುಕಲು ಬಂದ ಅಧಿಕಾರಿಗಳಿಗೆ ಸಿಕ್ತು 18 ಕೋಟಿ ಹಣ!

ಧಾರವಾಡ: ಸದ್ಯ ಲೋಕಸಭೆ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ಹಣ, ಹೆಂಡ ಸಾಗಾಣಿಕೆ ಬಗ್ಗೆ ಚುನಾವಣಾ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಹಿನ್ನಲೆ ಮಂಗಳವಾರ ಧಾರವಾಡದ ಫ್ಲ್ಯಾಟ್‌ ಒಂದರಲ್ಲಿ ಸಂಗ್ರಹಿಸಲಾಗಿದ್ದ 18 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.

ನಗರದ ನಾರಾಯಣಪುರ ರಸ್ತೆಯ ಅರ್ನಾ ರೆಸಿಡೆನ್ಸಿಯ ಮೂರನೇ ಮಹಡಿಯಲ್ಲಿರುವ ಮನೆಯೊಂದರ ಮೇಲೆ ಅಕ್ರಮ ಮದ್ಯ ಸಂಗ್ರಹಿಸಿಟ್ಟಿದ್ದಾರೆ ಎಂದು ಚುನಾವಣಾ ಅಧಿಕಾರರಿಗಳಿಗೆ ಮಾಹಿತಿ ಬಿತ್ತು. ತಕ್ಷಣವೇ ಅಧಿಕಾರಿಗಳು ಬಸವರಾಜು ದುತ್ತನ್ನವಾರ್‌ ಎಂಬುವವರ ಮನೆಗೆ ಭೇಟಿ ಕೊಟ್ಟಾಗ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಯಾಕೆಂದರೆ ಮದ್ಯದ ಬಾಟಲಿ ಹುಡುಕಲು ಬಂದವರಿಗೆ ಕಂತೆ ಕಂತೆ 18 ಕೋಟಿ ರೂಪಾಯಿ ಹಣ ಸಿಕ್ಕಿದೆ. ಬಳಿಕ ಆಗಮಿಸಿದ ಐಟಿ ಅಧಿಕಾರಿಗಳು ಹಣವನ್ನು ಎಣಿಸಿ ಸಿಕ್ಕ 18 ಕೋಟಿ ಹಣವನ್ನು ಹುಬ್ಬಳಿಯ ಕೇಶ್ವಾಪುರದ ಎಸ್‌ಬಿಐ ಬ್ಯಾಂಕಿನ ಐಟಿ ಖಾತೆಗೆ ಜಮೆ ಮಾಡಿದ್ದಾರೆ.

ಧಾರವಾಡದ ಉದ್ಯಮಿ ಯು.ಬಿ ಶೆಟ್ಟಿಗೆ ಸೇರಿರುವ ಈ ಹಣವನ್ನು ಅಕೌಂಟೆಂಟ್‌ ಬಸವರಾಜು ಮನೆಯಲ್ಲಿ ಇಡಲಾಗಿತ್ತು. ಈ ಹಣದ ಬಗ್ಗೆ ಅಧಿಕಾರಿಗಳು ಯು.ಬಿ ಶೆಟ್ಟಿ ಅವರ ಅಕೌಂಟೆಂಟ್‌ ಬಸವರಾಜು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

6 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

7 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

8 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

9 hours ago