ಧಾರವಾಡ: ಸದ್ಯ ಲೋಕಸಭೆ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ಹಣ, ಹೆಂಡ ಸಾಗಾಣಿಕೆ ಬಗ್ಗೆ ಚುನಾವಣಾ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಹಿನ್ನಲೆ ಮಂಗಳವಾರ ಧಾರವಾಡದ ಫ್ಲ್ಯಾಟ್ ಒಂದರಲ್ಲಿ ಸಂಗ್ರಹಿಸಲಾಗಿದ್ದ 18 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.
ನಗರದ ನಾರಾಯಣಪುರ ರಸ್ತೆಯ ಅರ್ನಾ ರೆಸಿಡೆನ್ಸಿಯ ಮೂರನೇ ಮಹಡಿಯಲ್ಲಿರುವ ಮನೆಯೊಂದರ ಮೇಲೆ ಅಕ್ರಮ ಮದ್ಯ ಸಂಗ್ರಹಿಸಿಟ್ಟಿದ್ದಾರೆ ಎಂದು ಚುನಾವಣಾ ಅಧಿಕಾರರಿಗಳಿಗೆ ಮಾಹಿತಿ ಬಿತ್ತು. ತಕ್ಷಣವೇ ಅಧಿಕಾರಿಗಳು ಬಸವರಾಜು ದುತ್ತನ್ನವಾರ್ ಎಂಬುವವರ ಮನೆಗೆ ಭೇಟಿ ಕೊಟ್ಟಾಗ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಯಾಕೆಂದರೆ ಮದ್ಯದ ಬಾಟಲಿ ಹುಡುಕಲು ಬಂದವರಿಗೆ ಕಂತೆ ಕಂತೆ 18 ಕೋಟಿ ರೂಪಾಯಿ ಹಣ ಸಿಕ್ಕಿದೆ. ಬಳಿಕ ಆಗಮಿಸಿದ ಐಟಿ ಅಧಿಕಾರಿಗಳು ಹಣವನ್ನು ಎಣಿಸಿ ಸಿಕ್ಕ 18 ಕೋಟಿ ಹಣವನ್ನು ಹುಬ್ಬಳಿಯ ಕೇಶ್ವಾಪುರದ ಎಸ್ಬಿಐ ಬ್ಯಾಂಕಿನ ಐಟಿ ಖಾತೆಗೆ ಜಮೆ ಮಾಡಿದ್ದಾರೆ.
ಧಾರವಾಡದ ಉದ್ಯಮಿ ಯು.ಬಿ ಶೆಟ್ಟಿಗೆ ಸೇರಿರುವ ಈ ಹಣವನ್ನು ಅಕೌಂಟೆಂಟ್ ಬಸವರಾಜು ಮನೆಯಲ್ಲಿ ಇಡಲಾಗಿತ್ತು. ಈ ಹಣದ ಬಗ್ಗೆ ಅಧಿಕಾರಿಗಳು ಯು.ಬಿ ಶೆಟ್ಟಿ ಅವರ ಅಕೌಂಟೆಂಟ್ ಬಸವರಾಜು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…