ರಾಜ್ಯ

ಅಕ್ರಮ ಮದ್ಯ ಹುಡುಕಲು ಬಂದ ಅಧಿಕಾರಿಗಳಿಗೆ ಸಿಕ್ತು 18 ಕೋಟಿ ಹಣ!

ಧಾರವಾಡ: ಸದ್ಯ ಲೋಕಸಭೆ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ಹಣ, ಹೆಂಡ ಸಾಗಾಣಿಕೆ ಬಗ್ಗೆ ಚುನಾವಣಾ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಹಿನ್ನಲೆ ಮಂಗಳವಾರ ಧಾರವಾಡದ ಫ್ಲ್ಯಾಟ್‌ ಒಂದರಲ್ಲಿ ಸಂಗ್ರಹಿಸಲಾಗಿದ್ದ 18 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.

ನಗರದ ನಾರಾಯಣಪುರ ರಸ್ತೆಯ ಅರ್ನಾ ರೆಸಿಡೆನ್ಸಿಯ ಮೂರನೇ ಮಹಡಿಯಲ್ಲಿರುವ ಮನೆಯೊಂದರ ಮೇಲೆ ಅಕ್ರಮ ಮದ್ಯ ಸಂಗ್ರಹಿಸಿಟ್ಟಿದ್ದಾರೆ ಎಂದು ಚುನಾವಣಾ ಅಧಿಕಾರರಿಗಳಿಗೆ ಮಾಹಿತಿ ಬಿತ್ತು. ತಕ್ಷಣವೇ ಅಧಿಕಾರಿಗಳು ಬಸವರಾಜು ದುತ್ತನ್ನವಾರ್‌ ಎಂಬುವವರ ಮನೆಗೆ ಭೇಟಿ ಕೊಟ್ಟಾಗ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಯಾಕೆಂದರೆ ಮದ್ಯದ ಬಾಟಲಿ ಹುಡುಕಲು ಬಂದವರಿಗೆ ಕಂತೆ ಕಂತೆ 18 ಕೋಟಿ ರೂಪಾಯಿ ಹಣ ಸಿಕ್ಕಿದೆ. ಬಳಿಕ ಆಗಮಿಸಿದ ಐಟಿ ಅಧಿಕಾರಿಗಳು ಹಣವನ್ನು ಎಣಿಸಿ ಸಿಕ್ಕ 18 ಕೋಟಿ ಹಣವನ್ನು ಹುಬ್ಬಳಿಯ ಕೇಶ್ವಾಪುರದ ಎಸ್‌ಬಿಐ ಬ್ಯಾಂಕಿನ ಐಟಿ ಖಾತೆಗೆ ಜಮೆ ಮಾಡಿದ್ದಾರೆ.

ಧಾರವಾಡದ ಉದ್ಯಮಿ ಯು.ಬಿ ಶೆಟ್ಟಿಗೆ ಸೇರಿರುವ ಈ ಹಣವನ್ನು ಅಕೌಂಟೆಂಟ್‌ ಬಸವರಾಜು ಮನೆಯಲ್ಲಿ ಇಡಲಾಗಿತ್ತು. ಈ ಹಣದ ಬಗ್ಗೆ ಅಧಿಕಾರಿಗಳು ಯು.ಬಿ ಶೆಟ್ಟಿ ಅವರ ಅಕೌಂಟೆಂಟ್‌ ಬಸವರಾಜು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

3 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

3 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

3 hours ago