CM Siddaramaiah Election dispute
ಬೆಂಗಳೂರು: ಚುನಾವಣೆಯಲ್ಲಿ ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.
ಶಂಕರ್ ಎಂಬುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದ್ದು, ಸಿದ್ದು ಶಾಸಕ ಸ್ಥಾನ ಗಟ್ಟಿಮುಟ್ಟಾಗಿದೆ.
2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಇದು ಲಂಚಕ್ಕೆ ಸಮವಾಗಿದ್ದು, ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123ರ ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ.
ಇದನ್ನೂ ಓದಿ:- ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ
ಸೆಕ್ಷನ್ 123(4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದು ಅಪರಾಧ. ಹಾಗಾಗಿ ಅಕ್ರಮ ಎಸಗುವ ಮೂಲಕ ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೆ.ಎಂ.ಶಂಕರ್ ಹೈಕೋರ್ಟ್ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…