ರಾಜ್ಯ

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಆಯ್ಕೆಗೆ ಚುನಾವಣೆ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಮಾಹಿತಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸುವ ಎಲ್ಲಾ ಪ್ರಯತ್ನ ನಡೆಸಲಾಗುತ್ತಿದ್ದು, ಈಗ ನೂತನ ರಾಜ್ಯಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಸುವ ಬಗ್ಗೆ ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿಕೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು, ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಕುರಿತು ಪ್ರಕ್ರಿಯೆ ಆರಂಭವಾಗಲಿದೆ. ಚುನಾವಣೆ ನಡೆಸಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಬೂತ್‌ ಕಮಿಟಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯಲಿದೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ. ಎಲ್ಲರೂ ಸೇರಿ ಚರ್ಚಿಸಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದರು.

ಈ ಮೂಲಕ ಕಳೆದ ಕೆಲ ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸುವಂತೆ ಬಿಗಿ ಪಟ್ಟು ಹಿಡಿದಿದ್ದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಣಕ್ಕೆ ಸಿಹಿಸುದ್ದಿ ಸಿಕ್ಕಿದಂತಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್:‌ ನಾಳೆಯಿಂದಲೇ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಹಣ

ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…

2 mins ago

ಹುಲಿ ಸೆರೆಗೆ ಚಾಮರಾಜನಗರದಲ್ಲಿ ಆಪರೇಷನ್‌ ಬೀಸ್ಟ್‌ ಆರಂಭ: ಡ್ರೋನ್‌ ಮೂಲಕ ಕಾರ್ಯಾಚರಣೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

20 mins ago

ಅಕ್ರಮವಾಗಿ ಕೇರಳಕ್ಕೆ ಜಾನುವಾರು ಸಾಗಾಟ: ಇಬ್ಬರ ಬಂಧನ

ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ…

39 mins ago

ವಿಶೇಷ ಚೇತನರಿಗೆ ಗುಡ್‌ನ್ಯೂಸ್‌: ಶಿಕ್ಷಣ ಉದ್ಯೋಗಕ್ಕೆ ಹೊಸ ನೀತಿ

ಬೆಂಗಳೂರು: ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದು, ಅವರಿಗೆ ಶಿಕ್ಷಣ ಉದ್ಯೋಗವಕಾಶ ಕಲ್ಪಿಸಲು ನಮ್ಮ ಸರ್ಕಾರ ಹೊಸ…

41 mins ago

ಹೈಕೋರ್ಟ್‌ಗೆ ಎರಡು ವಾರ ಚಳಿಗಾಲದ ರಜೆ: ಜನವರಿ.5ರಿಂದ ಕಲಾಪ ಪುನಾರಂಭ

ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.‌20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…

2 hours ago

ಮಾಜಿ ಸಚಿವ ಕೆ.ಎನ್‌ ರಾಜಣ್ಣ ಭೇಟಿ ಮಾಡಿದ ಡಿಸಿಎಂ

ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…

2 hours ago