ರಾಜ್ಯ

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಆಯ್ಕೆಗೆ ಚುನಾವಣೆ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಮಾಹಿತಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸುವ ಎಲ್ಲಾ ಪ್ರಯತ್ನ ನಡೆಸಲಾಗುತ್ತಿದ್ದು, ಈಗ ನೂತನ ರಾಜ್ಯಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಸುವ ಬಗ್ಗೆ ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿಕೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು, ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಕುರಿತು ಪ್ರಕ್ರಿಯೆ ಆರಂಭವಾಗಲಿದೆ. ಚುನಾವಣೆ ನಡೆಸಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಬೂತ್‌ ಕಮಿಟಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯಲಿದೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ. ಎಲ್ಲರೂ ಸೇರಿ ಚರ್ಚಿಸಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದರು.

ಈ ಮೂಲಕ ಕಳೆದ ಕೆಲ ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸುವಂತೆ ಬಿಗಿ ಪಟ್ಟು ಹಿಡಿದಿದ್ದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಣಕ್ಕೆ ಸಿಹಿಸುದ್ದಿ ಸಿಕ್ಕಿದಂತಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…

2 hours ago

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

2 hours ago

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌…

3 hours ago

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್‌ ಮೃತದೇಹ ಸ್ವಗ್ರಾಮಕ್ಕೆ

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌…

3 hours ago

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್‌ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…

3 hours ago

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

12 hours ago