ಮೈಸೂರು: ಇದೇ ಏಫ್ರಿಲ್ 19ರಿಂದ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ಅತ್ಯಂತ ಕಠಿಣ ಕ್ರಮಗಳನ್ನು ರೂಪಿಸಿದೆ. ಹಣ, ಮಾದಕ ವಸ್ತು, ಆಮಿಷಗಳನ್ನು ತಡೆಯಲು ಹಲವಾರು ಕಾರ್ಯಪಡೆಗಳನ್ನು ನಿಯೋಜಿಸಿದ್ದು, ನಿನ್ನೆಯಿಂದಲೇ (ಮಾ.೧೬) ಚುನಾವಣಾ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಯಾಗಿದೆ.
ಇಂದು (ಮಾ.೧೭) ಬೆಂಗಳೂರು-ಮೈಸೂರು ಹೆದ್ದಾರಿಯ ಹೆಜ್ಜಾಲ ಬಳಿಯ ಕಣಮಿಣಕೆ ಟೋಲ್ ಬಳಿ ಬ್ಯಾರಿಕೇಡ್ ಅಳವಡಿಸಿ ಬಿಡದಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದಾರೆ.
ವಾಹನಗಳನ್ನು ನಿಲ್ಲಿಸಿ ಓರಲ್ ಚೆಕ್ಕಿಂಗ್, ವಾಹನದ ಡಿಕ್ಕಿ ತೆಗೆಸಿ ತಪಾಸಣೆ ಮಾಡಲಾಗುತ್ತಿದೆ. ಆ ಮೂಲಕ ಚುನಾವಣಾ ಅಕ್ರಮ ನಡೆಯದಂತೆ ಪೊಲೀಸರು ಹದ್ದಿನ ಕಣ್ಗಾವಲು ಇರಿಸಿದ್ದಾರೆ.
ಕಂದಾಯ ಅಧಿಕಾರಿಗಳ ಗೈರಿನಲ್ಲಿಯೂ ಸಹಾ ಪೊಲೀಸರಿಂದ ಚೆಕಿಂಗ್ ಕಾರ್ಯ ನಡೆಯುತ್ತಿದೆ. ಹೆಜ್ಜಾಲ ಚೆಕ್ಪೋಸ್ಟ್ ಬೆಂಗಳೂರು-ಮೈಸೂರು ಹೆದ್ದಾರಿಯ ಅತಿದೊಡ್ಡ ಚೇಕಿಂಗ್ ಪಾಯಿಂಟ್ ಆಗಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…