ರಾಜ್ಯ

ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ

ಬೆಂಗಳೂರು : ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ರಾಜ್ಯ ಸರ್ಕಾರ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಮೀಸಲಾತಿ ಅಂತಿಮಗೊಳಿಸದ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್​ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಶಾಕ್‌ ಕೊಟ್ಟಿದೆ.

ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್​.ವಿ ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಚುನಾವಣಾ ಆಯೋಗದ ಪರ ವಕೀಲರು ವಾದ ಮಂಡಿಸಿ, ಸರ್ಕಾರ ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ್​ ಮತ್ತು ತಾಲೂಕು ಪಂಚಾಯತ್​ ಚುನಾವಣೆಗೆ ಮೀಸಲಾತಿ ಅಂತಿಮಗೊಳಿಸಿಲ್ಲ. ಇದರಿಂದ ಸರ್ಕಾರದ ವಿರುದ್ಧ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಬಳಿಕ ಸರ್ಕಾರದ ಪರ ವಾದ ಮಂಡಿಸಿದ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿ ವಾದ ಮಂಡಿಸಲು ಸ್ವಲ್ಪ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಈಗಾಗಿ ಮುಖ್ಯ ನ್ಯಾಯಮೂರ್ತಿ ಎನ್​.ವಿ ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಜುಲೈ 11ಕ್ಕೆ ವಿಚಾರಣೆ ಮುಂದೂಡಿದೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

5 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

5 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

5 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

6 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

7 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

7 hours ago