ಬೆಂಗಳೂರು: ಮುಂದಿನ ಜೂನ್ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್ನ 11 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ.
ಜೂನ್ 13 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಜೂನ್ ೩ ಕೊನೆಯ ದಿನವಾಗಿದೆ. ಜೂನ್ ೪ ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮತದಾನ ನಡೆಯುವ ಜೂನ್ ೧೩ ರ ಸಂಜೆ ಐದು ಗಂಟೆಗೆ ಮತ ಎಣಿಗೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ವಿಧಾನಸಭೆಯಿಂದ ವಿಧಾನಪರಿಷತ್ಗೆ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್ ೧೭ ಕ್ಕೆ ಕೊನೆಗೊಳ್ಳಲಿದೆ.
ಅರವಿಂದ ಕುಮಾರ್ ಅರಳಿ, ಎನ್ಎಸ್ ಬೋಸರಾಜು, ಕೆ.ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಮುನಿರಾಜುಗೌಡ ಪಿ.ಎಂ, ಕೆ.ಪಿ ನಂಜುಂಡಿ, ಬಿ.ಎಂ ಫಾರೂಕ್, ರಘುನಾಥ ರಾವ್ ಮಲ್ಕಾಪುರೆ, ಎನ್ ರವಿಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್ ಕುಮಾರ್ ಅವರುಗಳ ಅವಧಿ ಜೂನ್ 17 ಕ್ಕೆ ಕೊನೆಗೊಳ್ಳಲಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…