ವಿಜಯಪುರ: ಕಾರ ಹುಣ್ಣಿಮೆ ನೆಪದಲ್ಲಿ ಎತ್ತುಗಳು ಹಾಗೂ ಕುದುರೆಗಳಿಗೆ ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ಜಿಲ್ಲಾ ಪಂಚಾಯತ್ ಸಭಾಂಗಣದ ಮೈದಾನದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಎತ್ತು ಹಾಗೂ ಕುದುರೆಗಳ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಎತ್ತುಗಳು ಹಾಗೂ ಕುದುರೆಗಳು ಜೋರಾಗಿ ಓಡಲಿ ಎಂಬ ಕಾರಣಕ್ಕೆ ಅವುಗಳಿಗೆ ಕರೆಂಟ್ ಶಾಕ್ ನೀಡಲಾಗಿತ್ತು ಎಂದು ರೈತರು ಆರೋಪಿಸಿದ್ದಾರೆ.
ಸ್ಪರ್ಧೆ ಆಯೋಜನೆಗೂ ಮೊದಲೇ ರೈತರು ಎತ್ತುಗಳಿಗೆ ಕರೆಂಟ್ ಶಾಕ್ ಕೊಡುವುದು ಬೇಡ ಎಂದಿದ್ದರು. ಇದರ ಜೊತೆಗೆ ಪೊಲೀಸರು ಕೂಡ ಈ ವಿದ್ಯುತ್ ಶಾಕ್ ನೀಡಬೇಡಿ ಎಂದು ಆಯೋಜಕರಿಗೆ ಎಚ್ಚರಿಕೆ ನೀಡಿದ್ದರು.
ಯಾವುದಕ್ಕೂ ಕ್ಯಾರೆ ಎನ್ನದ ಸ್ಪರ್ಧೆ ಆಯೋಜಕರು ಏನೂ ಗೊತ್ತಿಲ್ಲದ ಮೂಕ ಪ್ರಾಣಿಗಳಿಗೆ ಕರೆಂಟ್ ಶಾಕ್ ನೀಡುವುದರ ಜೊತೆಗೆ ಬಾರುಕೋಲು ಹಾಗೂ ದೊಡ್ಡ ದೊಡ್ಡ ಬಡಿಗೆಗಳಿಂದ ಬಾರಿಸಿ ಚಿತ್ರಹಿಂಸೆ ನೀಡಿದ್ದಾರೆ.
ಕಾರ ಹುಣ್ಣಿಮೆ ಪ್ರಯುಕ್ತ ಮೂಕ ಪ್ರಾಣಿಗಳಿಗೆ ಈ ರೀತಿ ಚಿತ್ರಹಿಂಸೆ ನೀಡಿರುವುದು ಪ್ರಾಣಿಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಈ ಬಗ್ಗೆ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ರೀತಿಯ ಘಟನೆಗಳು ಮರುಕಳಿಸದಂತೆ ಜಾಗೃತಿ ಮೂಡಿಸಬೇಕಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…