ರಾಜ್ಯ

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಮಾ.11ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ರಮೇಶ್ ತಿಳಿಸಿದ್ದಾರೆ.

ಇಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

“ಸುಪ್ರೀಂ ಕೋರ್ಟ್ ನ ಆದೇಶದ ಅನ್ವಯ 2025 ಏಪ್ರಿಲ್‌ನಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಹಾಗೂ ವಿವಿಧ ಹಂತಗಳಲ್ಲಿ ನಿರ್ಮಾಣ ಹಂತದಲ್ಲಿರುವ, ಪೂರ್ಣಗೊಂಡಿರುವ ಕಟ್ಟಡಗಳಿಗೆ ಪೂರ್ಣ ಪ್ರಮಾಣ ಪತ್ರ (ಓ.ಸಿ) ಅಥವಾ ವಾಸಯೋಗ್ಯ ಪ್ರಮಾಣ ಪತ್ರ ನೀಡುವ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಬೇಕು. ರಾಜ್ಯಾದ್ಯಂತ ಲಕ್ಷಾಂತರ ಗ್ರಾಹಕರು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು, ಭೂ ಪರಿವರ್ತಿತ ಹಾಗೂ ಭೂ ಪರಿವರ್ತನೆಯಾಗದ ಪ್ರದೇಶಗಳು ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಸ್ಥಳಗಲ್ಲಿ ಕಟ್ಟಡ ನಿರ್ಮಾಣ ಕಾರ್ಯಗಳನ್ನು ಬ್ಯಾಂಕ್‌ಗಳಿಂದ ಸಾಲ ಪಡೆದು ವಿವಿಧ ಹಂತಗಳಲ್ಲಿ ನಡೆಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದಲ್ಲಿ ರಾಜ್ಯದ ಲಕ್ಷಾಂತರ ನಾಗರಿಕರಿಗೆ ಆರ್ಥಿಕ, ಮಾನಸಿಕ ಮತ್ತು ಸಾಮಾಜಿಕ ಸಮಸ್ಯೆ ಎದುರಾಗುತ್ತದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ, ಅರ್ಜಿ ಸಲ್ಲಿಸಿರುವ, ಮಂಜೂರಾತಿ ಪಡೆದಿರುವ ಕಾರ್ಯಾದೇಶಗೊಂಡಿರುವ ಕಟ್ಟಡಗಳಿಗೆ ಸೂಕ್ತ ವಿನಾಯಿತಿ ನೀಡುವ ಮೂಲಕ ಈಗಾಗಲೇ ನಿರ್ಮಾಣಗೊಂಡಿರುವ ಕಟ್ಟಡಗಳ ಗ್ರಾಹಕರಿಗೆ ಅನುಕೂಲವಾಗುವಂತೆ ಸರಕಾರ ಕ್ರಮಕೈಗೊಳ್ಳಬೇಕೆಂದು” ಆಗ್ರಹಿಸಿದರು.

“ಯಾವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರ ಕಡ್ಡಾಯ ಎಂಬುದನ್ನು ಸ್ಪಷ್ಟಪಡಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಕಟ್ಟಡದ ನಕ್ಷೆಗೆ ಅನುಮೋದನೆ ಪಡೆಯದೇ ನಿರ್ಮಾಣಗೊಂಡ ಕಟ್ಟಡಗಳಿಗೆ ಸಂಬಂಧಿಸಿದ ಲಕ್ಷಾಂತರ ಅರ್ಜಿಗಳು ಬಾಕಿ ಇರುವುದರಿಂದ ಅವುಗಳನ್ನು ಒಮ್ಮೆಯ ಕ್ರಮವಾಗಿ ಪರಿಹರಿಸಲು ವಿಶೇಷ ಕಾನೂನು ರೂಪಿಸುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು. ಎಂಎಸ್‌ಎಂಇ ಪ್ರಮಾಣ ಪತ್ರದ ಮೂಲಕ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸುತ್ತಿದ್ದು, ಸಂಪರ್ಕ ನೀಡುವುದಕ್ಕೆ ಕೆಲ ಸಮಸ್ಯೆಗಳು ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಮಾರ್ಗಸೂಚಿಗಳನ್ನು ನೀಡಬೇಕೆಂದು” ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ವಿ.ಚಂದ್ರಬಾಬು ಒತ್ತಾಯಿಸಿದರು.

ಈ ಬಗ್ಗೆ ಶೀಘ್ರವಾಗಿ ನಿರ್ದಾರ ಕೈಗೊಳ್ಳುವಂತೆ ಒತ್ತಾಯಿಸಿ ಮಾ.11ರಂದು ಬೆಳಗ್ಗೆ 10.30ಕ್ಕೆ ಪ್ರೀಡಂ ಪಾರ್ಕ್ನಲ್ಲಿ ಬಹೃತ್ ಪ್ರತಿಭಟನೆ ನಡೆಸಲು ಸಂಘ ನಿರ್ಧರಿಸಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿರುವ ಸದಸ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ರಮೇಶ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

1 min ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

5 mins ago

ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಮುಕ್ತ

ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

10 mins ago

ಕ್ವಾರಿ, ಕ್ರಷರ್‌ಗಳ ಬಂದ್; ನಿರ್ಮಾಣ ವಲಯಕ್ಕೆ ತಟ್ಟಿದ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…

16 mins ago

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago