ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಮಾ.11ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ರಮೇಶ್ ತಿಳಿಸಿದ್ದಾರೆ.
ಇಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
“ಸುಪ್ರೀಂ ಕೋರ್ಟ್ ನ ಆದೇಶದ ಅನ್ವಯ 2025 ಏಪ್ರಿಲ್ನಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಹಾಗೂ ವಿವಿಧ ಹಂತಗಳಲ್ಲಿ ನಿರ್ಮಾಣ ಹಂತದಲ್ಲಿರುವ, ಪೂರ್ಣಗೊಂಡಿರುವ ಕಟ್ಟಡಗಳಿಗೆ ಪೂರ್ಣ ಪ್ರಮಾಣ ಪತ್ರ (ಓ.ಸಿ) ಅಥವಾ ವಾಸಯೋಗ್ಯ ಪ್ರಮಾಣ ಪತ್ರ ನೀಡುವ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಬೇಕು. ರಾಜ್ಯಾದ್ಯಂತ ಲಕ್ಷಾಂತರ ಗ್ರಾಹಕರು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು, ಭೂ ಪರಿವರ್ತಿತ ಹಾಗೂ ಭೂ ಪರಿವರ್ತನೆಯಾಗದ ಪ್ರದೇಶಗಳು ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಸ್ಥಳಗಲ್ಲಿ ಕಟ್ಟಡ ನಿರ್ಮಾಣ ಕಾರ್ಯಗಳನ್ನು ಬ್ಯಾಂಕ್ಗಳಿಂದ ಸಾಲ ಪಡೆದು ವಿವಿಧ ಹಂತಗಳಲ್ಲಿ ನಡೆಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದಲ್ಲಿ ರಾಜ್ಯದ ಲಕ್ಷಾಂತರ ನಾಗರಿಕರಿಗೆ ಆರ್ಥಿಕ, ಮಾನಸಿಕ ಮತ್ತು ಸಾಮಾಜಿಕ ಸಮಸ್ಯೆ ಎದುರಾಗುತ್ತದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ, ಅರ್ಜಿ ಸಲ್ಲಿಸಿರುವ, ಮಂಜೂರಾತಿ ಪಡೆದಿರುವ ಕಾರ್ಯಾದೇಶಗೊಂಡಿರುವ ಕಟ್ಟಡಗಳಿಗೆ ಸೂಕ್ತ ವಿನಾಯಿತಿ ನೀಡುವ ಮೂಲಕ ಈಗಾಗಲೇ ನಿರ್ಮಾಣಗೊಂಡಿರುವ ಕಟ್ಟಡಗಳ ಗ್ರಾಹಕರಿಗೆ ಅನುಕೂಲವಾಗುವಂತೆ ಸರಕಾರ ಕ್ರಮಕೈಗೊಳ್ಳಬೇಕೆಂದು” ಆಗ್ರಹಿಸಿದರು.
“ಯಾವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರ ಕಡ್ಡಾಯ ಎಂಬುದನ್ನು ಸ್ಪಷ್ಟಪಡಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಕಟ್ಟಡದ ನಕ್ಷೆಗೆ ಅನುಮೋದನೆ ಪಡೆಯದೇ ನಿರ್ಮಾಣಗೊಂಡ ಕಟ್ಟಡಗಳಿಗೆ ಸಂಬಂಧಿಸಿದ ಲಕ್ಷಾಂತರ ಅರ್ಜಿಗಳು ಬಾಕಿ ಇರುವುದರಿಂದ ಅವುಗಳನ್ನು ಒಮ್ಮೆಯ ಕ್ರಮವಾಗಿ ಪರಿಹರಿಸಲು ವಿಶೇಷ ಕಾನೂನು ರೂಪಿಸುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು. ಎಂಎಸ್ಎಂಇ ಪ್ರಮಾಣ ಪತ್ರದ ಮೂಲಕ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸುತ್ತಿದ್ದು, ಸಂಪರ್ಕ ನೀಡುವುದಕ್ಕೆ ಕೆಲ ಸಮಸ್ಯೆಗಳು ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಮಾರ್ಗಸೂಚಿಗಳನ್ನು ನೀಡಬೇಕೆಂದು” ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ವಿ.ಚಂದ್ರಬಾಬು ಒತ್ತಾಯಿಸಿದರು.
ಈ ಬಗ್ಗೆ ಶೀಘ್ರವಾಗಿ ನಿರ್ದಾರ ಕೈಗೊಳ್ಳುವಂತೆ ಒತ್ತಾಯಿಸಿ ಮಾ.11ರಂದು ಬೆಳಗ್ಗೆ 10.30ಕ್ಕೆ ಪ್ರೀಡಂ ಪಾರ್ಕ್ನಲ್ಲಿ ಬಹೃತ್ ಪ್ರತಿಭಟನೆ ನಡೆಸಲು ಸಂಘ ನಿರ್ಧರಿಸಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿರುವ ಸದಸ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ರಮೇಶ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…