ರಾಜ್ಯ

ಸಮೀಕ್ಷೆ ಕಾರ್ಯದಿಂದ ವ್ಯತ್ಯಯವಾಗದು ವಿದ್ಯುತ್ ಬಿಲ್ : ಬೆಸ್ಕಾಂ ಸ್ಪಷ್ಟನೆ

ಬೆಂಗಳೂರು : ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮನೆಗಳನ್ನು ಗುರುತಿಸಿ ಪಟ್ಟಿ ಮಾಡುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿದ್ದರಿಂದ ಕೆಲ ಗೃಹ ಜ್ಯೋತಿ ಗ್ರಾಹಕರ ಬಿಲ್‌ನಲ್ಲಿ ಆಗಿದ್ದ ವ್ಯತ್ಯಯವನ್ನು ಸರಿಪಡಿಸಿ ಪರಿಷ್ಕೃತ ಬಿಲ್ ವಿತರಿಸಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಸೆಪ್ಟೆಂಬರ್ ತಿಂಗಳಲ್ಲಿ ಮೀಟರ್ ರೀಡರ್‌ಗಳು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಭಾಗವಾಗಿ ಮನೆಗಳನ್ನು ಪಟ್ಟಿ ಮಾಡುವ ಕಾರ್ಯ ಹಾಗೂ ಮೀಟರ್‌ ರೀಡಿಂಗ್‌ಅನ್ನು ಪ್ರೋಬ್‌ಗಳ ಮೂಲಕ ಮೊದಲ ಬಾರಿಗೆ ನಡೆಸುತ್ತಿರುವುದರಿಂದ ವಿದ್ಯುತ್‌ ಬಿಲ್‌ ವಿತರಣೆಯ ದಿನಾಂಕವನ್ನು ಸೆ.15ನೇ ತಾರಿಕಿನಿಂದ 25ನೇ ತಾರೀಕಿನವರೆಗೆ ವಿಸ್ತರಿಸಲಾಗಿತ್ತು.

ಇದನ್ನೂ ಓದಿ :-ಕಲ್ಯಾಣ ಕರ್ನಾಟಕ | ಭೂಗರ್ಭ ಜಲಮಟ್ಟ ಹೆಚ್ಚಿಸುವ ಯೋಜನೆಗೆ ಚಿಂತನೆ: ಸಚಿವ ಎನ್ ಎಸ್ ಭೋಸರಾಜು

ಈ ಪ್ರಕ್ರಿಯೆಯಿಂದ ಕೆಲ ಪ್ರಕರಣಗಳಲ್ಲಿ ಗೃಹಜ್ಯೋತಿ ಗ್ರಾಹಕರಿಗೆ ಭಾಗಶಃ ಬಿಲ್‌ ಬಂದಿರುವುದು ಬೆಸ್ಕಾಂ ಗಮನಕ್ಕೆ ಬಂದಿದೆ. ಅವುಗಳನ್ನು ಕಳೆದ ತಿಂಗಳುಗಳ ಸರಾಸರಿಯಂತೆ ಲೆಕ್ಕ ಹಾಕಿ, ಪರಿಷ್ಕೃತ ಬಿಲ್‌ ನೀಡಲಾಗುತ್ತದೆ. ಈ ಮೂಲಕ ಗೃಹಜ್ಯೋತಿ ಫಲಾನುಭವಿಗಳಿಗೆ ಯೋಜನೆಯ ಲಾಭ ಪಡೆಯುವಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

9 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

10 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

10 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

11 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

15 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

19 hours ago