ರಾಜ್ಯ

18 ಸಾವಿರ ಮೆ.ವ್ಯಾ. ದಾಟಿದ ವಿದ್ಯುತ್ ಬೇಡಿಕೆ

  • ರಾಜ್ಯ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಹೆಚ್ಚಾದ ವಿದ್ಯುತ್ ಬೇಡಿಕೆ
  • ಬೇಡಿಕೆ ಈಡೇರಿಸಲು ವಿನಿಮಯ ಆಧಾರದ ಮೇಲೆ ಅನ್ಯ ರಾಜ್ಯಗಳಿಂದ ವಿದ್ಯುತ್

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) ಯಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದೆ. ಏಪ್ರಿಲ್ ತಿಂಗಳಲ್ಲಿ 18,500 ಮೆಗಾವ್ಯಾಟ್ ತಲುಪುವ ಸಾಧ್ಯತೆ ಇದೆ.

ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಮತ್ತು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, “ಕಳೆದ ಫೆಬ್ರವರಿಯಲ್ಲಿ ವಿದ್ಯುತ್ ಬೇಡಿಕೆ ಗರಿಷ್ಠ ಬೇಡಿಕೆ ಅವಧಿಯಲ್ಲಿ 18,350 ಮೆಗಾ ವ್ಯಾಟ್ ತಲುಪಿದ್ದರೆ, ಮಾರ್ಚ್ ತಿಂಗಳಲ್ಲಿ 18,395 ಮೆಗಾ ವ್ಯಾಟ್ ಗೆ ಏರಿಕೆಯಾಗಿದೆ. ಮಾ. 7ರಂದು ಗರಿಷ್ಠ ವಿದ್ಯುತ್ ಬೇಡಿಕೆ 18,395 ಮೆಗಾ ವ್ಯಾಟ್ ತಲುಪಿತ್ತು”, ಎಂದು ಹೇಳಿದರು.

“ಕೋವಿಡ್ ಬಳಿಕ ವಿದ್ಯುತ್ ಬೇಡಿಕೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಗರಿಷ್ಠ ವಿದ್ಯುತ್ ಬೇಡಿಕೆ 2020-21ನೇ ಸಾಲಿನಲ್ಲಿ 14,367 ಮೆಗಾವ್ಯಾಟ್ ಇದ್ದರೆ, 2021-22ರಲ್ಲಿ 14,818 ಮೆ.ವ್ಯಾ., 2022-23ರಲ್ಲಿ 15,828 ಮ.ವ್ಯಾ. ಇದ್ದರೆ, 2023-24ರಲ್ಲಿ 17,220 ಮೆ.ವ್ಯಾ. ಇತ್ತು. ಈ ಬಾರಿ 18,385 ಮೆ.ವ್ಯಾ.ಗೆ ಏರಿಕೆಯಾಗಿದೆ. ಅದೇ ರೀತಿ ಪ್ರಸ್ತುತ ಗರಿಷ್ಠ ವಿದ್ಯುತ್ ಬಳಕೆ 357 ಮಿಲಿಯನ್ ಯೂನಿಟ್ ಇದೆ”, ಎಂದು ಮಾಹಿತಿ ನೀಡಿದರು.

“ಗರಿಷ್ಠ ಬೇಡಿಕೆ ಅವಧಿಯಲ್ಲಿ 2024ರ ಏಪ್ರಿಲ್ ತಿಂಗಳಲ್ಲಿ 16,985 ಮೆ.ವ್ಯಾ. ಬೇಡಿಕೆ ಬಂದಿದ್ದು, ಈ ವರ್ಷ 18,294 ಮೆ.ವ್ಯಾ. ತಲುಪುವ ಅಂದಾಜಿದೆ. ಅಂದರೆ ವಿದ್ಯುತ್ ಬೇಡಿಕೆಯಲ್ಲಿ ಶೇ. 8.1ರಷ್ಟು ಹೆಚ್ಚಳವಾಗಲಿದೆ. ಅದೇ ರೀತಿ 2024ರ ಮೇ ತಿಂಗಳಲ್ಲಿ 16,826 ಮೆ.ವ್ಯಾ. ಬೇಡಿಕೆ ಬಂದಿದ್ದು, ಈ ಬಾರಿ 17,122 ಮೆ.ವ್ಯಾ.ಗೆ ಏರಿಕೆಯಾಗುವ (ಶೇ. 1.8ರಷ್ಟು ಹೆಚ್ಚಳ) ಅದಾಜು ಮಾಡಲಾಗಿದೆ. ಅಲ್ಲದೆ, ವಿದ್ಯುತ್ ಬಳಕೆ ಪ್ರಮಾಣ ಏಪ್ರಿಲ್ ತಿಂಗಳಲ್ಲಿ 352 ಮಿಲಿಯನ್ ಯೂನಿಟ್ ಮತ್ತು ಮೇ ತಿಂಗಳಲ್ಲಿ 331 ಮಿಲಿಯನ್ ಯೂನಿಟ್ ತಲುಪುವ ನಿರೀಕ್ಷೆಯಿದೆ”, ಎಂದು ವಿವರಿಸಿದರು.

ಬೇಡಿಕೆ ಪೂರೈಸಲು ಸಿದ್ಧತೆ
“ರಾಜ್ಯದಲ್ಲಿ ಏರಿಕೆಯಾಗಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. 2024ರ ಡಿಸೆಂಬರ್ ನಿಂದ ಮೇ ತಿಂಗಳವರೆಗೆ ಬೇಡಿಕೆಗೆ ಅನುಗುಣವಾಗಿ ಉತ್ತರ ಪ್ರದೇಶದಿಂದ 100ರಿಂದ 1,400 (ಗರಿಷ್ಠ ಬೇಡಿಕೆ ಅವಧಿಯಲ್ಲಿ) ಮೆಗಾವ್ಯಾಟ್ ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆಯಲಾಗುತ್ತಿದೆ. ಅದೇ ರೀತಿ ಜನವರಿಯಿಂದ ಏಪ್ರಿಲ್ ಅಂತ್ಯದವರೆಗೆ ಪಂಜಾಬ್ ನಿಂದ 200ರಿಂದ 531 ಮೆಗವ್ಯಾಟ್ ವಿದ್ಯುತ್ತನ್ನು ವಿನಿಮಯ ಆಧಾರದ ಮೇಲೆ ಪಡೆಯಲು ಒಪ್ಪಂದ ಮಾಡಿಕೊಳ್ಳಲಾಗಿದೆ”, ಎಂದರು.

“ಇದಲ್ಲದೆ, ಮಾ. 1ರಿಂದ 15ರವರೆಗೆ ಕೂಡಗಿಯಲ್ಲಿರುವ ಎನ್ ಟಿಪಿಸಿಯಿಂದ 310 ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಪಡೆಯಲಾಗುತ್ತಿತ್ತು. ಮಾ. 15ರಿಂದ ಇನ್ನೂ ಹೆಚ್ಚುವರಿಯಾಗಿ 100 ಮೆ.ವ್ಯಾ. (ಒಟ್ಟು 410 ಮ.ವ್ಯಾ.) ವಿದ್ಯುತ್ ಪಡೆಯಲಾಗಿದೆ. ಜತೆಗೆ ಮಾರ್ಚ್ ತಿಂಗಳಿನಿಂದ ಮೇ ಅಂತ್ಯದವರೆಗೆ ಇಂಧನ ಸುರಕ್ಷತೆ ನೀತಿಯಡಿ ಇತರೆ ರಾಜ್ಯಗಳಿಂದ ಮಾಸಿಕ 1000 ಮೆ.ವ್ಯಾ. ವಿದ್ಯುತ್ ಪಡೆಯಲು ಪಿಸಿಕೆಎಲ್ ಒಪ್ಪಂದ ಮಾಡಿಕೊಂಡಿದೆ”, ಎಂದು ತಿಳಿಸಿದರು.

“ರೈತರಿಗೆ ದಿನದ 7 ಗಂಟೆ ತ್ರಿ ಫೇಸ್ ವಿದ್ಯುತ್ ಪೂರೈಸಲು ಕ್ರಮ ವಹಿಸಲಾಗಿದೆ. ಅನೇಕ ಕಡೆಗಳಲ್ಲಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸೋಲಾರ್ ವಿದ್ಯುತ್ ಒದಗಿಸಲಾಗುತ್ತಿದೆ. ಕೆಲವೆಡೆ 7 ಗಂಟೆ ತ್ರಿ ಫೇಸ್ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಬೆಳಗ್ಗೆ ಮತ್ತು ಸಂಜೆ ವೇಳೆ ವಿದ್ಯುತ್ ಪೂರೈಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ (ತೋಟದ ಮನೆಗಳು ಸೇರಿ) ನೋಡಿಕೊಳ್ಳಲು ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಸಿಂಗಲ್ ಫೇಸ್ ವಿದ್ಯುತ್ ಒದಗಿಸಲಾಗುತ್ತಿದೆ”, ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago