ಬೆಂಗಳೂರು: 2023ರ ಡಿಸೆಂಬರ್ 4ರಂದು ಹಾಸನದಲ್ಲಿ ಕಾಡಾನೆಯೊಂದಿಗಿನ ಕಾದಾಟದಲ್ಲಿ ದಸರಾ ಆನೆ ಅರ್ಜುನ ಮಡಿದಿತ್ತು. ದಸರಾ ಆನೆ ಮಡಿದ ಜಾಗದಲ್ಲಿ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಇದೇ ಜುಲೈನಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ ಕಾಡಾನೆ ಸೆರೆಗೆ ತೆರಳಿದ್ದ ಅರ್ಜುನ ಅಂಡ್ ಟೀಂ ಕೂಂಬಿಂಗ್ ಕಾರ್ಯಾಚರಣೆ ವೇಳೆ ಅರ್ಜುನನನ್ನು ಕಳೆದುಕೊಂಡಿದತ್ತು.
ವಿಧಾಸೌಧದ ಮುಂಭಾಗ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಸಫಾರಿ ವಿಶೇಷ ವಿನ್ಯಾಸದೊಂದಿಗೆ ನಿರ್ಮಾಣವಾಗಿರುವ ಮೂರು ಮಿನಿ ಬಸ್ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಹಾಸನ ಜಿಲ್ಲೆಯ ಯಸಳೂರಿನಲ್ಲಿ ಅರ್ಜುನ ಮಡಿದ ಸ್ಥಳದಲ್ಲಿ ಸಮಾಧಿ ಹಾಗೂ ಸ್ಮಾರಕ ಹಾಗೂ ಅರ್ಜುನ ವಾಸವಿದ್ದ ಬಳ್ಳೆ ಶಿಬಿರದಲ್ಲಿಯೂ ಅರ್ಜುನನ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಅವರು ಹೇಳಿದರು.
ಈ ಎರಡೂ ಸ್ಮಾರಕಗಳ ಬಳಿ ಅರ್ಜುನನ ಪ್ರತಿಕೃತಿ ನಿರ್ಮಿಸಲಾಗುವುದು. ಇದ ಜತೆಗೆ ಅರ್ಜುನ ಅಂಬಾರಿ ಹೊತ್ತ ಚಿತ್ರಗಳು, ವಿವಿಧ ಆನೆ, ಹುಲಿ ಕಾರ್ಯಾಚರಣೆ ವೇಳೆ ಸೆರೆಹಿಡಿದರುವ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಅರ್ಜುನನ ಸಾಹಸ, ಕೊಡುಗೆ ಮತ್ತು ಸೇವೆಯನ್ನು ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡಲಾಗುವುದು ಎಂದು ಅವರು ನೆನೆದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…