ರಾಮನಗರ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಕಾಡಾನೆ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ಕನಕಪುರ ತಾಲ್ಲೂಕಿನ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕರಿಯಪ್ಪ ಎಂಬುವವರೇ ಆನೆ ದಾಳಿಗೆ ಸಿಲುಕಿ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ.
ಇಂದು ಬೆಳಿಗ್ಗೆ ಜಮೀನಿನಲ್ಲಿ ಹಾಕಿದ್ದ ಮೆದೆ ನೋಡಲು ತೆರಳಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ತಕ್ಷಣ ಗಾಯಾಳು ಕರಿಯಪ್ಪ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರಾದರೂ ಮಾರ್ಗಮಧ್ಯೆ ಕರಿಯಪ್ಪ ಕೊನೆಯುಸಿರೆಳೆದಿದ್ದಾರೆ.
ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಮೃತ ಕರಿಯಪ್ಪ ಅವರ ಮೃತದೇಹವನ್ನು ರವಾನಿಸಲಾಗಿದ್ದು, ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…