ರಾಜ್ಯ

ಕಾಫಿನಾಡಿನಲ್ಲಿ ಕಾಡಾನೆಗಳ ದಾಂಧಲೆ; ನೊಂದ ರೈತರಿಂದ ಪ್ರತಿಭಟನೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಬೆಳೆದ ಬೆಳಯನ್ನು ನಾಶಮಾಡಿವೆ. ಚಿಕ್ಕಮಗಳೂರಿನಲ್ಲಿ ರೈತರ ಗೋಳನ್ನು ಯಾರು ಕೇಳುವವರೇ ಇಲ್ಲದಂತಾಗಿದೆ. ಹೇಗೋ ತಾನು ಬೆಳೆದ ಬೆಳೆಯನ್ನು ನಂಬಿ ಜೀವನ ಸಾಗಿಸುತ್ತಿರುವ ರೈತರಿಗೆ ಈಗ ಬರಸಿಡಿಲು ಬಡಿದಂತಾಗಿದೆ.

ಚಿಕ್ಕಮಗಳೂರಿನ ಅನೇಕ ಹಳ್ಳಿಗಳಲ್ಲಿ ಕಾಡಾನೆಗಳ ಕಾಟ ವಿಪರೀತವಾಗಿದ್ದು, ಅನ್ನದಾತ ಭಾರೀ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ರೈತರು ಬೆಳೆದ ಬಾಳೆ, ತೆಂಗು, ಅಡಿಕೆ, ಶುಂಠಿ ಸೇರಿದಂತೆ ಹಲವು ಬೆಳೆಗಳನ್ನು ಕಾಡಾನೆಗಳು ತುಳಿದು ತಿಂದು ಹಾಕಿವೆ. ಭಾರೀ ಮಳೆಯಾಗುತ್ತಿರುವ ಸಂದರ್ಭದಲ್ಲಿ ಅನ್ನದಾತ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದಾನೆ. ಆದರೆ ಕಾಡಾನೆಗಳು ದಾಂಧಲೆ ನಡೆಸಿ ಬೆಳೆ ನಾಶ ಮಾಡುತ್ತಿರುವುದು ರೈತರನ್ನು ಭಾರೀ ನಷ್ಟಕ್ಕೀಡುಮಾಡಿದೆ.

ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ವಿಷಯ ತಿಳಿಸಿದ್ರೂ ಏನೂ ಪ್ರಯೋಜನವಾಗ್ತಿಲ್ಲ. ವಿಷಯ ತಿಳಿದರೂ ಕೂಡ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಂದು ರೈತರ ಕಷ್ಟ ಆಲಿಸುತ್ತಿಲ್ಲ. ಅರಣ್ಯಾಧಿಕಾರಿಗಳ ನಡೆಯಿಂದ ರೊಚ್ಚಿಗೆದ್ದ ರೈತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ ಹಾಗೂ ಅರಣ್ಯಾಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಆದಷ್ಟು ಬೇಗ ಕಾಡಾನೆಗಳ ಹಾವಳಿಯನ್ನು ತಪ್ಪಿಸಬೇಕು. ಕಾಡಾನೆ ಬರದಂತೆ ತಡೆಗೋಡೆ ನಿರ್ಮಿಸಿ, ರೈತರ ಕಷ್ಟಗಳನ್ನು ಆಲಿಸಬೇಕು. ಇದು ಮುಂದುವರಿದರೆ ನಾವು ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಮಾತು ಮಾತಿಗೂ ರೈತರ ಪರ ಎನ್ನುವ ರಾಜ್ಯ ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಂಡು ಜಾಣಕುರುಡರಂತೆ ಇರುವ ಅರಣ್ಯಾಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಾ? ಹಾಗೂ ಮುಂದಿನ ದಿನಗಳಲ್ಲಾದ್ರೂ ರೈತರ ಸಂಕಷ್ಟವನ್ನು ದೂರ ಮಾಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.

andolana

Recent Posts

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

27 mins ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

46 mins ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

55 mins ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

1 hour ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

2 hours ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

2 hours ago