ರಾಜ್ಯ

ಕಾಫಿನಾಡಿನಲ್ಲಿ ಕಾಡಾನೆಗಳ ದಾಂಧಲೆ; ನೊಂದ ರೈತರಿಂದ ಪ್ರತಿಭಟನೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಬೆಳೆದ ಬೆಳಯನ್ನು ನಾಶಮಾಡಿವೆ. ಚಿಕ್ಕಮಗಳೂರಿನಲ್ಲಿ ರೈತರ ಗೋಳನ್ನು ಯಾರು ಕೇಳುವವರೇ ಇಲ್ಲದಂತಾಗಿದೆ. ಹೇಗೋ ತಾನು ಬೆಳೆದ ಬೆಳೆಯನ್ನು ನಂಬಿ ಜೀವನ ಸಾಗಿಸುತ್ತಿರುವ ರೈತರಿಗೆ ಈಗ ಬರಸಿಡಿಲು ಬಡಿದಂತಾಗಿದೆ.

ಚಿಕ್ಕಮಗಳೂರಿನ ಅನೇಕ ಹಳ್ಳಿಗಳಲ್ಲಿ ಕಾಡಾನೆಗಳ ಕಾಟ ವಿಪರೀತವಾಗಿದ್ದು, ಅನ್ನದಾತ ಭಾರೀ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ರೈತರು ಬೆಳೆದ ಬಾಳೆ, ತೆಂಗು, ಅಡಿಕೆ, ಶುಂಠಿ ಸೇರಿದಂತೆ ಹಲವು ಬೆಳೆಗಳನ್ನು ಕಾಡಾನೆಗಳು ತುಳಿದು ತಿಂದು ಹಾಕಿವೆ. ಭಾರೀ ಮಳೆಯಾಗುತ್ತಿರುವ ಸಂದರ್ಭದಲ್ಲಿ ಅನ್ನದಾತ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದಾನೆ. ಆದರೆ ಕಾಡಾನೆಗಳು ದಾಂಧಲೆ ನಡೆಸಿ ಬೆಳೆ ನಾಶ ಮಾಡುತ್ತಿರುವುದು ರೈತರನ್ನು ಭಾರೀ ನಷ್ಟಕ್ಕೀಡುಮಾಡಿದೆ.

ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ವಿಷಯ ತಿಳಿಸಿದ್ರೂ ಏನೂ ಪ್ರಯೋಜನವಾಗ್ತಿಲ್ಲ. ವಿಷಯ ತಿಳಿದರೂ ಕೂಡ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಂದು ರೈತರ ಕಷ್ಟ ಆಲಿಸುತ್ತಿಲ್ಲ. ಅರಣ್ಯಾಧಿಕಾರಿಗಳ ನಡೆಯಿಂದ ರೊಚ್ಚಿಗೆದ್ದ ರೈತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ ಹಾಗೂ ಅರಣ್ಯಾಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಆದಷ್ಟು ಬೇಗ ಕಾಡಾನೆಗಳ ಹಾವಳಿಯನ್ನು ತಪ್ಪಿಸಬೇಕು. ಕಾಡಾನೆ ಬರದಂತೆ ತಡೆಗೋಡೆ ನಿರ್ಮಿಸಿ, ರೈತರ ಕಷ್ಟಗಳನ್ನು ಆಲಿಸಬೇಕು. ಇದು ಮುಂದುವರಿದರೆ ನಾವು ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಮಾತು ಮಾತಿಗೂ ರೈತರ ಪರ ಎನ್ನುವ ರಾಜ್ಯ ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಂಡು ಜಾಣಕುರುಡರಂತೆ ಇರುವ ಅರಣ್ಯಾಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಾ? ಹಾಗೂ ಮುಂದಿನ ದಿನಗಳಲ್ಲಾದ್ರೂ ರೈತರ ಸಂಕಷ್ಟವನ್ನು ದೂರ ಮಾಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.

andolana

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

7 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

20 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

20 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

20 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago