ರಾಜ್ಯ

ಕಾಫಿನಾಡಿನಲ್ಲಿ ಕಾಡಾನೆಗಳ ದಾಂಧಲೆ; ನೊಂದ ರೈತರಿಂದ ಪ್ರತಿಭಟನೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಬೆಳೆದ ಬೆಳಯನ್ನು ನಾಶಮಾಡಿವೆ. ಚಿಕ್ಕಮಗಳೂರಿನಲ್ಲಿ ರೈತರ ಗೋಳನ್ನು ಯಾರು ಕೇಳುವವರೇ ಇಲ್ಲದಂತಾಗಿದೆ. ಹೇಗೋ ತಾನು ಬೆಳೆದ ಬೆಳೆಯನ್ನು ನಂಬಿ ಜೀವನ ಸಾಗಿಸುತ್ತಿರುವ ರೈತರಿಗೆ ಈಗ ಬರಸಿಡಿಲು ಬಡಿದಂತಾಗಿದೆ.

ಚಿಕ್ಕಮಗಳೂರಿನ ಅನೇಕ ಹಳ್ಳಿಗಳಲ್ಲಿ ಕಾಡಾನೆಗಳ ಕಾಟ ವಿಪರೀತವಾಗಿದ್ದು, ಅನ್ನದಾತ ಭಾರೀ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ರೈತರು ಬೆಳೆದ ಬಾಳೆ, ತೆಂಗು, ಅಡಿಕೆ, ಶುಂಠಿ ಸೇರಿದಂತೆ ಹಲವು ಬೆಳೆಗಳನ್ನು ಕಾಡಾನೆಗಳು ತುಳಿದು ತಿಂದು ಹಾಕಿವೆ. ಭಾರೀ ಮಳೆಯಾಗುತ್ತಿರುವ ಸಂದರ್ಭದಲ್ಲಿ ಅನ್ನದಾತ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದಾನೆ. ಆದರೆ ಕಾಡಾನೆಗಳು ದಾಂಧಲೆ ನಡೆಸಿ ಬೆಳೆ ನಾಶ ಮಾಡುತ್ತಿರುವುದು ರೈತರನ್ನು ಭಾರೀ ನಷ್ಟಕ್ಕೀಡುಮಾಡಿದೆ.

ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ವಿಷಯ ತಿಳಿಸಿದ್ರೂ ಏನೂ ಪ್ರಯೋಜನವಾಗ್ತಿಲ್ಲ. ವಿಷಯ ತಿಳಿದರೂ ಕೂಡ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಂದು ರೈತರ ಕಷ್ಟ ಆಲಿಸುತ್ತಿಲ್ಲ. ಅರಣ್ಯಾಧಿಕಾರಿಗಳ ನಡೆಯಿಂದ ರೊಚ್ಚಿಗೆದ್ದ ರೈತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ ಹಾಗೂ ಅರಣ್ಯಾಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಆದಷ್ಟು ಬೇಗ ಕಾಡಾನೆಗಳ ಹಾವಳಿಯನ್ನು ತಪ್ಪಿಸಬೇಕು. ಕಾಡಾನೆ ಬರದಂತೆ ತಡೆಗೋಡೆ ನಿರ್ಮಿಸಿ, ರೈತರ ಕಷ್ಟಗಳನ್ನು ಆಲಿಸಬೇಕು. ಇದು ಮುಂದುವರಿದರೆ ನಾವು ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಮಾತು ಮಾತಿಗೂ ರೈತರ ಪರ ಎನ್ನುವ ರಾಜ್ಯ ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಂಡು ಜಾಣಕುರುಡರಂತೆ ಇರುವ ಅರಣ್ಯಾಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಾ? ಹಾಗೂ ಮುಂದಿನ ದಿನಗಳಲ್ಲಾದ್ರೂ ರೈತರ ಸಂಕಷ್ಟವನ್ನು ದೂರ ಮಾಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.

andolana

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

4 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

6 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

8 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

8 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

10 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

10 hours ago