Categories: ರಾಜ್ಯ

ಬಿಪಿಎಲ್‌ ಅರ್ಹರಿಗೆ ತಪ್ಪಲ್ಲ; ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ರಾಜ್ಯದಾದ್ಯಂತ ಬಿಪಿಎಲ್‌ ಕಾರ್ಡ್‌ ಬಗ್ಗೆ ಹರಡುತ್ತಿರುವ ಊಹಾಪೋಹಗಳ ಕುರಿತು ಸಿಎಂ ಸಿದ್ದರಾಮಯ್ಯ ಅರ್ಹರಿಗೆ ಬಿಪಿಎಲ್‌ ರದ್ದಾಗುವುದಕ್ಕೆ ನಾನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯ ಭಾರತ್‌ ಜೋಡೊ ಭವನದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆಯ ಕಾರ್ಯಕ್ರಮಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ʼಅನರ್ಹರು ಒಂದಿಬ್ಬರು ಸೇರಿಕೊಂಡರು ಪರವಾಗಿಲ್ಲ ಅರ್ಹರಿಗೆ ಕಾರ್ಡ್‌ ತಪ್ಪಬಾರದುʼ ಎಂದು ಹೇಳಿದರು.

ʼಬಿಪಿಎಲ್‌ ಎಪಿಎಲ್‌ ಅಂದರೇನು? ಬಡತನಗಿಂತ ಮೇಲಿರುವವರು, ಕೆಳಗಿರುವವರು ಎಂದರ್ಥʼ. ಶ್ರೀಮಂತರು, ಸರ್ಕಾರಿ ನೌಕರರು ಬಿಪಿಎಲ್‌ಗೆ ಅರ್ಹರಲ್ಲ ಅವರಿಗೆ ಎಪಿಎಲ್‌ ಕೊಡಿ, ಅದಕ್ಕೂ ಕೆಲ ಸವಲತ್ತುಗಳಿವೆ. ಎಂದು ಆಹಾರ ಸಚಿವ ಮುನಿಯಪ್ಪ ಅವರಿಗೆ ಸೂಚಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿ, ʼಉಳುವವನೇ ಭೂಮಿಯ ಒಡೆಯ, ಬ್ಯಾಂಕ್ ರಾಷ್ಟ್ರೀಕರಣ‌ ಇನ್ನಿತರ ಕಾನೂನಗಳನ್ನು ಜಾರಿ ಮಾಡಿ ದೇಶದ ಬೆಳವಣಿಗೆಗೆ ತಂಬಾ ಕಾಣಿಕೆ ನೀಡಿದ್ದಾರೆ. ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರು ಬದಲಾವಣೆ ಮಾಡಲು ಸಾಧ್ಯವಿಲ್ಲʼ ಎಂದರು.

ತಮ್ಮ ಭಾಷಣದಲ್ಲಿ ಬಿಪಿಎಲ್‌ ಕಾರ್ಡ್ ಬಗ್ಗೆ ಮಾತನಾಡಿದ ಕೆ.ಎಚ್.‌ ಮುನಿಯಪ್ಪ, ಬಿಜೆಪಿಗೆ ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡುವುದು ಇಷ್ಟವಿಲ್ಲ ಈ ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಾರೆ. ಶೇ 20-25 ರಷ್ಟು ಅರ್ಹರಲ್ಲದವರೂ ಸೇರಿಕೊಂಡಿದ್ದಾರೆ ಅವರನ್ನು ತೆಗೆದು ಎಪಿಎಲ್‌ಗೆ ಹಾಕುತ್ತೇವೆ ಎಂದರು. ‌

ಬಡತನ ರೇಖೆಗಿಂತ ಕೆಳಗಿರುವವರು ಹಾಗೂ ಬಿಪಿಎಲ್‌ಗೆ ಅರ್ಹರಲ್ಲದವರ ಅಂಕಿ ಅಂಶಗಳನ್ನು ಜನರಿಗೆ ತಿಳಿಸಬೇಕಿದೆ. ಅರ್ಹರಲ್ಲದವರು ಇದರ ಅನುಕೂಲ ಪಡೆಯುತ್ತರುವುದರಿಂದ ಸತ್ಯವಾದ ಮಾಹಿತಿಯನ್ನು ಅಧಿಕಾರಿಗಳ ಮೂಲಕ ಬಹಿರಂಗಪಡಿಸಬೇಕಿದೆ. ಇದರಿಂದ ನಿಜವಾದ ಬಡವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದರು.

ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಮಾತನಾಡಿ, ಪಕ್ಷ ವಿಭಜನೆಯಾಗುತ್ತದೆ ಎಂದಾಗಲೂ ಇಂದಿರಾ ಗಾಂಧಿ ದಿಟ್ಟ ನಿಲುವು ತೆಗೆದುಕೊಂಡಿದ್ದರು. ರಾಷ್ಟ್ರೀಯ ಯೋಜನೆಗಳ ವಿಚಾರ ಬಂದಾಗ ಪಕ್ಷದ ಆಗಿನ ನಾಯಕರೇ ಇಂದಿರಾ ಗಾಂದಿಯನ್ನು ವಿರೋಧಿಸುತ್ತಿದ್ದರು. ಈಗ ರಾಹುಲ್‌ ಗಾಂಧಿಯವರು ಮೀಸಲಾತಿ ಪ್ರಮಾಣವನ್ನು ಶೇ. 50ರಷ್ಟು ಹೆಚ್ಚಿಸಲು ತಿರ್ಮಾನ ಮಾಡಿದ್ದಾರೆ ಈಗಲೂ ಕಾಂಗ್ರೆಸ್‌ನ ಕೆಲವರು ಇದನ್ನು ವಿರೋಧಿಸಬಹುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಾಲತಿ ಶರ್ಮಾ, ಪ್ಯಾರೇಜಾನ್‌, ಮಮತಾ, ಸುಗಂಧಿ ಗಂಗಾಧರ್‌, ಸೋನು ವೇಣುಗೋಪಾಲ್‌ ಅವರಿಗೆ ಇಂದಿರಾ ಗಾಂಧಿ ಸ್ಮಾರಕ ಗೌರವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಅರ್ಚನ ಎಸ್‌ ಎಸ್

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

52 mins ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

1 hour ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

1 hour ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

1 hour ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

1 hour ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

1 hour ago