Categories: ರಾಜ್ಯ

ಬಿಪಿಎಲ್‌ ಅರ್ಹರಿಗೆ ತಪ್ಪಲ್ಲ; ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ರಾಜ್ಯದಾದ್ಯಂತ ಬಿಪಿಎಲ್‌ ಕಾರ್ಡ್‌ ಬಗ್ಗೆ ಹರಡುತ್ತಿರುವ ಊಹಾಪೋಹಗಳ ಕುರಿತು ಸಿಎಂ ಸಿದ್ದರಾಮಯ್ಯ ಅರ್ಹರಿಗೆ ಬಿಪಿಎಲ್‌ ರದ್ದಾಗುವುದಕ್ಕೆ ನಾನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯ ಭಾರತ್‌ ಜೋಡೊ ಭವನದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆಯ ಕಾರ್ಯಕ್ರಮಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ʼಅನರ್ಹರು ಒಂದಿಬ್ಬರು ಸೇರಿಕೊಂಡರು ಪರವಾಗಿಲ್ಲ ಅರ್ಹರಿಗೆ ಕಾರ್ಡ್‌ ತಪ್ಪಬಾರದುʼ ಎಂದು ಹೇಳಿದರು.

ʼಬಿಪಿಎಲ್‌ ಎಪಿಎಲ್‌ ಅಂದರೇನು? ಬಡತನಗಿಂತ ಮೇಲಿರುವವರು, ಕೆಳಗಿರುವವರು ಎಂದರ್ಥʼ. ಶ್ರೀಮಂತರು, ಸರ್ಕಾರಿ ನೌಕರರು ಬಿಪಿಎಲ್‌ಗೆ ಅರ್ಹರಲ್ಲ ಅವರಿಗೆ ಎಪಿಎಲ್‌ ಕೊಡಿ, ಅದಕ್ಕೂ ಕೆಲ ಸವಲತ್ತುಗಳಿವೆ. ಎಂದು ಆಹಾರ ಸಚಿವ ಮುನಿಯಪ್ಪ ಅವರಿಗೆ ಸೂಚಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿ, ʼಉಳುವವನೇ ಭೂಮಿಯ ಒಡೆಯ, ಬ್ಯಾಂಕ್ ರಾಷ್ಟ್ರೀಕರಣ‌ ಇನ್ನಿತರ ಕಾನೂನಗಳನ್ನು ಜಾರಿ ಮಾಡಿ ದೇಶದ ಬೆಳವಣಿಗೆಗೆ ತಂಬಾ ಕಾಣಿಕೆ ನೀಡಿದ್ದಾರೆ. ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರು ಬದಲಾವಣೆ ಮಾಡಲು ಸಾಧ್ಯವಿಲ್ಲʼ ಎಂದರು.

ತಮ್ಮ ಭಾಷಣದಲ್ಲಿ ಬಿಪಿಎಲ್‌ ಕಾರ್ಡ್ ಬಗ್ಗೆ ಮಾತನಾಡಿದ ಕೆ.ಎಚ್.‌ ಮುನಿಯಪ್ಪ, ಬಿಜೆಪಿಗೆ ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡುವುದು ಇಷ್ಟವಿಲ್ಲ ಈ ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಾರೆ. ಶೇ 20-25 ರಷ್ಟು ಅರ್ಹರಲ್ಲದವರೂ ಸೇರಿಕೊಂಡಿದ್ದಾರೆ ಅವರನ್ನು ತೆಗೆದು ಎಪಿಎಲ್‌ಗೆ ಹಾಕುತ್ತೇವೆ ಎಂದರು. ‌

ಬಡತನ ರೇಖೆಗಿಂತ ಕೆಳಗಿರುವವರು ಹಾಗೂ ಬಿಪಿಎಲ್‌ಗೆ ಅರ್ಹರಲ್ಲದವರ ಅಂಕಿ ಅಂಶಗಳನ್ನು ಜನರಿಗೆ ತಿಳಿಸಬೇಕಿದೆ. ಅರ್ಹರಲ್ಲದವರು ಇದರ ಅನುಕೂಲ ಪಡೆಯುತ್ತರುವುದರಿಂದ ಸತ್ಯವಾದ ಮಾಹಿತಿಯನ್ನು ಅಧಿಕಾರಿಗಳ ಮೂಲಕ ಬಹಿರಂಗಪಡಿಸಬೇಕಿದೆ. ಇದರಿಂದ ನಿಜವಾದ ಬಡವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದರು.

ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಮಾತನಾಡಿ, ಪಕ್ಷ ವಿಭಜನೆಯಾಗುತ್ತದೆ ಎಂದಾಗಲೂ ಇಂದಿರಾ ಗಾಂಧಿ ದಿಟ್ಟ ನಿಲುವು ತೆಗೆದುಕೊಂಡಿದ್ದರು. ರಾಷ್ಟ್ರೀಯ ಯೋಜನೆಗಳ ವಿಚಾರ ಬಂದಾಗ ಪಕ್ಷದ ಆಗಿನ ನಾಯಕರೇ ಇಂದಿರಾ ಗಾಂದಿಯನ್ನು ವಿರೋಧಿಸುತ್ತಿದ್ದರು. ಈಗ ರಾಹುಲ್‌ ಗಾಂಧಿಯವರು ಮೀಸಲಾತಿ ಪ್ರಮಾಣವನ್ನು ಶೇ. 50ರಷ್ಟು ಹೆಚ್ಚಿಸಲು ತಿರ್ಮಾನ ಮಾಡಿದ್ದಾರೆ ಈಗಲೂ ಕಾಂಗ್ರೆಸ್‌ನ ಕೆಲವರು ಇದನ್ನು ವಿರೋಧಿಸಬಹುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಾಲತಿ ಶರ್ಮಾ, ಪ್ಯಾರೇಜಾನ್‌, ಮಮತಾ, ಸುಗಂಧಿ ಗಂಗಾಧರ್‌, ಸೋನು ವೇಣುಗೋಪಾಲ್‌ ಅವರಿಗೆ ಇಂದಿರಾ ಗಾಂಧಿ ಸ್ಮಾರಕ ಗೌರವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಅರ್ಚನ ಎಸ್‌ ಎಸ್

Recent Posts

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

4 mins ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

9 mins ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

2 hours ago

ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನ ಉದ್ಘಾಟನೆ : ಸಾವಿರಾರು ಮಂದಿ ದರ್ಶನ, ಕೊಂಡೋತ್ಸವದಲ್ಲಿ ಭಕ್ತಿಪರವಶ

ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…

2 hours ago

ಬೆಂಗಳೂರು | ಮಾಂಜಾ ದಾರಕ್ಕೆ ಸಿಲುಕಿ ಬೈಕ್‌ ಸವಾರ ಸಾವು

ಬೆಂಗಳೂರು : ಬೀದರ್‌ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…

2 hours ago

ಕೇಂದ್ರ ಬಜೆಟ್‌ ದೇಶದ ಅಭಿವೃದ್ಧಿಗೆ ಪೂರಕ : ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…

3 hours ago