Categories: ರಾಜ್ಯ

ಬಿಪಿಎಲ್‌ ಅರ್ಹರಿಗೆ ತಪ್ಪಲ್ಲ; ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ರಾಜ್ಯದಾದ್ಯಂತ ಬಿಪಿಎಲ್‌ ಕಾರ್ಡ್‌ ಬಗ್ಗೆ ಹರಡುತ್ತಿರುವ ಊಹಾಪೋಹಗಳ ಕುರಿತು ಸಿಎಂ ಸಿದ್ದರಾಮಯ್ಯ ಅರ್ಹರಿಗೆ ಬಿಪಿಎಲ್‌ ರದ್ದಾಗುವುದಕ್ಕೆ ನಾನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯ ಭಾರತ್‌ ಜೋಡೊ ಭವನದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆಯ ಕಾರ್ಯಕ್ರಮಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ʼಅನರ್ಹರು ಒಂದಿಬ್ಬರು ಸೇರಿಕೊಂಡರು ಪರವಾಗಿಲ್ಲ ಅರ್ಹರಿಗೆ ಕಾರ್ಡ್‌ ತಪ್ಪಬಾರದುʼ ಎಂದು ಹೇಳಿದರು.

ʼಬಿಪಿಎಲ್‌ ಎಪಿಎಲ್‌ ಅಂದರೇನು? ಬಡತನಗಿಂತ ಮೇಲಿರುವವರು, ಕೆಳಗಿರುವವರು ಎಂದರ್ಥʼ. ಶ್ರೀಮಂತರು, ಸರ್ಕಾರಿ ನೌಕರರು ಬಿಪಿಎಲ್‌ಗೆ ಅರ್ಹರಲ್ಲ ಅವರಿಗೆ ಎಪಿಎಲ್‌ ಕೊಡಿ, ಅದಕ್ಕೂ ಕೆಲ ಸವಲತ್ತುಗಳಿವೆ. ಎಂದು ಆಹಾರ ಸಚಿವ ಮುನಿಯಪ್ಪ ಅವರಿಗೆ ಸೂಚಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿ, ʼಉಳುವವನೇ ಭೂಮಿಯ ಒಡೆಯ, ಬ್ಯಾಂಕ್ ರಾಷ್ಟ್ರೀಕರಣ‌ ಇನ್ನಿತರ ಕಾನೂನಗಳನ್ನು ಜಾರಿ ಮಾಡಿ ದೇಶದ ಬೆಳವಣಿಗೆಗೆ ತಂಬಾ ಕಾಣಿಕೆ ನೀಡಿದ್ದಾರೆ. ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರು ಬದಲಾವಣೆ ಮಾಡಲು ಸಾಧ್ಯವಿಲ್ಲʼ ಎಂದರು.

ತಮ್ಮ ಭಾಷಣದಲ್ಲಿ ಬಿಪಿಎಲ್‌ ಕಾರ್ಡ್ ಬಗ್ಗೆ ಮಾತನಾಡಿದ ಕೆ.ಎಚ್.‌ ಮುನಿಯಪ್ಪ, ಬಿಜೆಪಿಗೆ ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡುವುದು ಇಷ್ಟವಿಲ್ಲ ಈ ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಾರೆ. ಶೇ 20-25 ರಷ್ಟು ಅರ್ಹರಲ್ಲದವರೂ ಸೇರಿಕೊಂಡಿದ್ದಾರೆ ಅವರನ್ನು ತೆಗೆದು ಎಪಿಎಲ್‌ಗೆ ಹಾಕುತ್ತೇವೆ ಎಂದರು. ‌

ಬಡತನ ರೇಖೆಗಿಂತ ಕೆಳಗಿರುವವರು ಹಾಗೂ ಬಿಪಿಎಲ್‌ಗೆ ಅರ್ಹರಲ್ಲದವರ ಅಂಕಿ ಅಂಶಗಳನ್ನು ಜನರಿಗೆ ತಿಳಿಸಬೇಕಿದೆ. ಅರ್ಹರಲ್ಲದವರು ಇದರ ಅನುಕೂಲ ಪಡೆಯುತ್ತರುವುದರಿಂದ ಸತ್ಯವಾದ ಮಾಹಿತಿಯನ್ನು ಅಧಿಕಾರಿಗಳ ಮೂಲಕ ಬಹಿರಂಗಪಡಿಸಬೇಕಿದೆ. ಇದರಿಂದ ನಿಜವಾದ ಬಡವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದರು.

ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಮಾತನಾಡಿ, ಪಕ್ಷ ವಿಭಜನೆಯಾಗುತ್ತದೆ ಎಂದಾಗಲೂ ಇಂದಿರಾ ಗಾಂಧಿ ದಿಟ್ಟ ನಿಲುವು ತೆಗೆದುಕೊಂಡಿದ್ದರು. ರಾಷ್ಟ್ರೀಯ ಯೋಜನೆಗಳ ವಿಚಾರ ಬಂದಾಗ ಪಕ್ಷದ ಆಗಿನ ನಾಯಕರೇ ಇಂದಿರಾ ಗಾಂದಿಯನ್ನು ವಿರೋಧಿಸುತ್ತಿದ್ದರು. ಈಗ ರಾಹುಲ್‌ ಗಾಂಧಿಯವರು ಮೀಸಲಾತಿ ಪ್ರಮಾಣವನ್ನು ಶೇ. 50ರಷ್ಟು ಹೆಚ್ಚಿಸಲು ತಿರ್ಮಾನ ಮಾಡಿದ್ದಾರೆ ಈಗಲೂ ಕಾಂಗ್ರೆಸ್‌ನ ಕೆಲವರು ಇದನ್ನು ವಿರೋಧಿಸಬಹುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಾಲತಿ ಶರ್ಮಾ, ಪ್ಯಾರೇಜಾನ್‌, ಮಮತಾ, ಸುಗಂಧಿ ಗಂಗಾಧರ್‌, ಸೋನು ವೇಣುಗೋಪಾಲ್‌ ಅವರಿಗೆ ಇಂದಿರಾ ಗಾಂಧಿ ಸ್ಮಾರಕ ಗೌರವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಅರ್ಚನ ಎಸ್‌ ಎಸ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago