Categories: ರಾಜ್ಯ

ಬಿಪಿಎಲ್‌ ಅರ್ಹರಿಗೆ ತಪ್ಪಲ್ಲ; ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ರಾಜ್ಯದಾದ್ಯಂತ ಬಿಪಿಎಲ್‌ ಕಾರ್ಡ್‌ ಬಗ್ಗೆ ಹರಡುತ್ತಿರುವ ಊಹಾಪೋಹಗಳ ಕುರಿತು ಸಿಎಂ ಸಿದ್ದರಾಮಯ್ಯ ಅರ್ಹರಿಗೆ ಬಿಪಿಎಲ್‌ ರದ್ದಾಗುವುದಕ್ಕೆ ನಾನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯ ಭಾರತ್‌ ಜೋಡೊ ಭವನದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆಯ ಕಾರ್ಯಕ್ರಮಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ʼಅನರ್ಹರು ಒಂದಿಬ್ಬರು ಸೇರಿಕೊಂಡರು ಪರವಾಗಿಲ್ಲ ಅರ್ಹರಿಗೆ ಕಾರ್ಡ್‌ ತಪ್ಪಬಾರದುʼ ಎಂದು ಹೇಳಿದರು.

ʼಬಿಪಿಎಲ್‌ ಎಪಿಎಲ್‌ ಅಂದರೇನು? ಬಡತನಗಿಂತ ಮೇಲಿರುವವರು, ಕೆಳಗಿರುವವರು ಎಂದರ್ಥʼ. ಶ್ರೀಮಂತರು, ಸರ್ಕಾರಿ ನೌಕರರು ಬಿಪಿಎಲ್‌ಗೆ ಅರ್ಹರಲ್ಲ ಅವರಿಗೆ ಎಪಿಎಲ್‌ ಕೊಡಿ, ಅದಕ್ಕೂ ಕೆಲ ಸವಲತ್ತುಗಳಿವೆ. ಎಂದು ಆಹಾರ ಸಚಿವ ಮುನಿಯಪ್ಪ ಅವರಿಗೆ ಸೂಚಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿ, ʼಉಳುವವನೇ ಭೂಮಿಯ ಒಡೆಯ, ಬ್ಯಾಂಕ್ ರಾಷ್ಟ್ರೀಕರಣ‌ ಇನ್ನಿತರ ಕಾನೂನಗಳನ್ನು ಜಾರಿ ಮಾಡಿ ದೇಶದ ಬೆಳವಣಿಗೆಗೆ ತಂಬಾ ಕಾಣಿಕೆ ನೀಡಿದ್ದಾರೆ. ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರು ಬದಲಾವಣೆ ಮಾಡಲು ಸಾಧ್ಯವಿಲ್ಲʼ ಎಂದರು.

ತಮ್ಮ ಭಾಷಣದಲ್ಲಿ ಬಿಪಿಎಲ್‌ ಕಾರ್ಡ್ ಬಗ್ಗೆ ಮಾತನಾಡಿದ ಕೆ.ಎಚ್.‌ ಮುನಿಯಪ್ಪ, ಬಿಜೆಪಿಗೆ ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡುವುದು ಇಷ್ಟವಿಲ್ಲ ಈ ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಾರೆ. ಶೇ 20-25 ರಷ್ಟು ಅರ್ಹರಲ್ಲದವರೂ ಸೇರಿಕೊಂಡಿದ್ದಾರೆ ಅವರನ್ನು ತೆಗೆದು ಎಪಿಎಲ್‌ಗೆ ಹಾಕುತ್ತೇವೆ ಎಂದರು. ‌

ಬಡತನ ರೇಖೆಗಿಂತ ಕೆಳಗಿರುವವರು ಹಾಗೂ ಬಿಪಿಎಲ್‌ಗೆ ಅರ್ಹರಲ್ಲದವರ ಅಂಕಿ ಅಂಶಗಳನ್ನು ಜನರಿಗೆ ತಿಳಿಸಬೇಕಿದೆ. ಅರ್ಹರಲ್ಲದವರು ಇದರ ಅನುಕೂಲ ಪಡೆಯುತ್ತರುವುದರಿಂದ ಸತ್ಯವಾದ ಮಾಹಿತಿಯನ್ನು ಅಧಿಕಾರಿಗಳ ಮೂಲಕ ಬಹಿರಂಗಪಡಿಸಬೇಕಿದೆ. ಇದರಿಂದ ನಿಜವಾದ ಬಡವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದರು.

ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಮಾತನಾಡಿ, ಪಕ್ಷ ವಿಭಜನೆಯಾಗುತ್ತದೆ ಎಂದಾಗಲೂ ಇಂದಿರಾ ಗಾಂಧಿ ದಿಟ್ಟ ನಿಲುವು ತೆಗೆದುಕೊಂಡಿದ್ದರು. ರಾಷ್ಟ್ರೀಯ ಯೋಜನೆಗಳ ವಿಚಾರ ಬಂದಾಗ ಪಕ್ಷದ ಆಗಿನ ನಾಯಕರೇ ಇಂದಿರಾ ಗಾಂದಿಯನ್ನು ವಿರೋಧಿಸುತ್ತಿದ್ದರು. ಈಗ ರಾಹುಲ್‌ ಗಾಂಧಿಯವರು ಮೀಸಲಾತಿ ಪ್ರಮಾಣವನ್ನು ಶೇ. 50ರಷ್ಟು ಹೆಚ್ಚಿಸಲು ತಿರ್ಮಾನ ಮಾಡಿದ್ದಾರೆ ಈಗಲೂ ಕಾಂಗ್ರೆಸ್‌ನ ಕೆಲವರು ಇದನ್ನು ವಿರೋಧಿಸಬಹುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಾಲತಿ ಶರ್ಮಾ, ಪ್ಯಾರೇಜಾನ್‌, ಮಮತಾ, ಸುಗಂಧಿ ಗಂಗಾಧರ್‌, ಸೋನು ವೇಣುಗೋಪಾಲ್‌ ಅವರಿಗೆ ಇಂದಿರಾ ಗಾಂಧಿ ಸ್ಮಾರಕ ಗೌರವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಅರ್ಚನ ಎಸ್‌ ಎಸ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

8 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

16 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

16 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

16 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

19 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

19 hours ago