ರಾಜ್ಯ

ರಾಜ್ಯದಲ್ಲಿ ತುರ್ತು ಪರಿಸ್ಥಿತಿ, ರಾಜ್ಯಪಾಲರ ಅಧಿಕಾರ ಕಿತ್ತುಕೊಳ್ಳುವ ಪ್ರಯತ್ನ: ಆರ್‌.ಅಶೋಕ

ಕಾಂಗ್ರೆಸ್‌ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ

ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಕೆ.ಸುಧಾಕರ್‌ ಅವರು ಕೋವಿಡ್‌ ಸಂದರ್ಭದಲ್ಲಿ ಕೆಲಸ ಮಾಡಿದ್ದರು. ಆ ಸಮಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಮನೆಯಲ್ಲೇ ಕುಳಿತಿದ್ದರು. ಆದರೆ ಈಗ ಅವರ ವಿರುದ್ಧ ಕೋವಿಡ್‌ ಹಗರಣದ ಆರೋಪ ಹೊರಿಸಲಾಗಿದೆ. ರಾಜ್ಯಪಾಲರ ಮೇಲೆ ಸರ್ಕಾರ ಸೇಡು ತೀರಿಸಿಕೊಳ್ಳಲು ಸರ್ಕಾರ ಮುಂದಾಗಿದ್ದು, ವಿಶ್ವವಿದ್ಯಾಲಯದಲ್ಲಿ ಅವರ ಅಧಿಕಾರ ಕಿತ್ತುಕೊಳ್ಳಲು ಪ್ರಯತ್ನ ನಡೆಸಲಾಗಿದೆ. ಕಾಂಗ್ರೆಸ್‌ ಶಾಶ್ವತವಾಗಿ ಅಧಿಕಾರದಲ್ಲಿ ಇರಲಿದೆ ಎಂಬ ಚಿಂತನೆಯಲ್ಲಿದೆ. ಕಾಂಗ್ರೆಸ್‌ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಹೇಳಿದರು.

ಶಾಸಕ ಮುನಿರತ್ನ ಬಿಜೆಪಿಗೆ ಮುನ್ನ ಕಾಂಗ್ರೆಸ್‌ನಲ್ಲೇ ಇದ್ದರು. ಅವರು ಕಾಂಗ್ರೆಸ್‌ನಲ್ಲಿದ್ದಾಗ ಕಾಂಗ್ರೆಸ್‌ ನಾಯಕರೇ ಅವರನ್ನು ಬೆಂಬಲಿಸಿದ್ದರು. ರಾಯಚೂರಿನಲ್ಲಿ ಪಿಎಸ್‌ಐ ಕುಟುಂಬದವರು 16 ಗಂಟೆ ಬೀದಿಯಲ್ಲಿ ಕುಳಿತು ಪ್ರತಿಭಟನೆ ಮಾಡಿದಾಗ ಶಾಸಕರನ್ನು ಬಂಧಿಸಲಿಲ್ಲ. ಕೃಷಿ ಅಧಿಕಾರಿ ವೀಡಿಯೋ ಮಾಡಿ ಕಳುಹಿಸಿದಾಗ ಸಚಿವರನ್ನು ಬಂಧನ ಮಾಡಿಲ್ಲ. ಮುನಿರತ್ನ ತಪ್ಪು ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ. ಅದನ್ನು ಬಿಟ್ಟು ಏಕಾಏಕಿ ಬಂಧಿಸಿದ್ದು ಏಕೆ ಎಂದು ಪ್ರಶ್ನೆ ಮಾಡಿದರು.

ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗ ಅವರ ವಿರುದ್ಧ 65 ಪ್ರಕರಣಗಳಿತ್ತು. ಆದರೆ ಅವರು ಮಾತ್ರ ಶುದ್ಧ ಎನ್ನಲಾಗುತ್ತದೆ. ಬಿಜೆಪಿಯವರು ಸಂವಿಧಾನದ ಬಗ್ಗೆ ಸಣ್ಣ ಮಾತು ಹೇಳಿದ್ದಕ್ಕೆ, ಅದನ್ನೇ ದೊಡ್ಡ ಸಮಸ್ಯೆ ಎಂಬಂತೆ ಬಿಂಬಿಸಲಾಗಿದೆ. ರಾಹುಲ್‌ ಗಾಂಧಿ ವಿದೇಶಕ್ಕೆ ಹೋಗಿ ಮೀಸಲು ಬದಲಾಯಿಸುವ ಬಗ್ಗೆ ಮಾತನಾಡಿದ್ದರು. ಈ ಕುರಿತು ಕಾಂಗ್ರೆಸ್‌ ಪ್ರತಿಭಟನೆ ಮಾಡಲಿ ಎಂದರು.

ಸೋಲುವ ಭಯ

ಜವಹರಲಾಲ್‌ ನೆಹರೂ ಅಧಿಕಾರದಲ್ಲಿದ್ದಾಗ ಏಕಕಾಲಕ್ಕೆ ಚುನಾವಣೆ ನಡೆಯುತ್ತಿತ್ತು. ಈಗ ಅದನ್ನೇ ಎನ್‌ಡಿಎ ಸರ್ಕಾರ ಮಾಡಲು ಹೊರಟರೆ ತಪ್ಪು ಎನ್ನಲಾಗುತ್ತಿದೆ. ಇಡೀ ವರ್ಷ ಚುನಾವಣೆ ನಡೆಯುವುದನ್ನು ತಪ್ಪಿಸಲು ಒಂದೇ ಬಾರಿಗೆ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರಿಂದ ಉಳಿತಾಯವಾದ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸಬಹುದು. ಆದರೆ ಈ ರೀತಿ ಮಾಡಿದರೆ ಸೋಲುತ್ತೇವೆ ಎಂಬ ಭಯ ಕಾಂಗ್ರೆಸ್‌ಗಿದೆ. ಆದ್ದರಿಂದ ಈ ಹೊಸ ವ್ಯವಸ್ಥೆಯನ್ನು ಕಾಂಗ್ರೆಸ್‌ ನಾಯಕರು ವಿರೋಧಿಸುತ್ತಿದ್ದಾರೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

5 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

6 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

6 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

7 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

8 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

9 hours ago