ಬೆಂಗಳೂರು: ನೈಸರ್ಗಿಕ ಸಂಪನ್ಮೂಲಗಳ ಸುದೀರ್ಘ ಬಳಕೆ ಮತ್ತು ಸಂರಕ್ಷಣೆಗಾಗಿ ಮರು ಬಳಕೆ ಮತ್ತು ಪುನರ್ ಬಳಕೆಗೆ ಒತ್ತು ನೀಡಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿಂದು ನಡೆದ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಮತ್ತು “ಸಂಪನ್ಮೂಲಗಳ ಸುದೀರ್ಘ ಬಳಕೆಯ ಆರ್ಥಿಕತೆ ಮತ್ತು ಸುಸ್ಥಿರತೆಯ ಸಮ್ಮೇಳನ” ಉದ್ಘಾಟಿಸಿ ಅವರು ಸಂಪನ್ಮೂಲದ ಹಿತ-ಮಿತ ಬಳಕೆಯ ಅಗತ್ಯ ಪ್ರತಿಪಾದಿಸಿದರು.
ಜೀವನವೂ ಇರಬೇಕು, ಜೀವನೋಪಾಯವೂ ಇರಬೇಕು, ಪ್ರಕೃತಿಯೂ ಉಳಿಯಬೇಕು, ಪ್ರಗತಿಯೂ ಆಗಬೇಕು ಎಂಬುದು ನಮ್ಮ ಸರ್ಕಾರದ ನಿಲುವಾಗಿದ್ದು, ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.
ಇದನ್ನು ಓದಿ: ಮಂಡ್ಯದ ಶಿವನಸಮುದ್ರದಲ್ಲಿ ಆಪರೇಷನ್ ಕಾಡಾನೆ
1987ರಲ್ಲಿ, ವಿಶ್ವಸಂಸ್ಥೆಯ ಬ್ರಂಡ್ಲ್ಯಾಂಡ್ ಆಯೋಗ ಭವಿಷ್ಯದ ಪೀಳಿಗೆಯ ಸ್ವಂತ ಅಗತ್ಯಗಳನ್ನು ಪೂರೈಸುವ ಸಾಮರ್ಥ್ಯದೊಂದಿಗೆ ರಾಜಿ ಮಾಡಿಕೊಳ್ಳದೆ ಇಂದಿನ ಪೀಳಿಗೆಯ ಅಗತ್ಯಗಳನ್ನು ಪೂರೈಸುವುದು ಸುಸ್ಥಿರತೆ ಎಂದು ವ್ಯಾಖ್ಯಾನಿಸಿದೆ. ನಾವು ಉತ್ತಮ ರೂಢಿಗಳನ್ನು ಅಳವಡಿಸಿಕೊಂಡು ಪ್ರಗತಿಯ ಪಥದಲ್ಲಿ ಸಾಗುವುದರ ಜೊತೆಗೆ ಪ್ರಕೃತಿ ಪರಿಸರ ಉಳಿಸಬೇಕಿದೆ ಎಂದರು.
ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ಪರಿಣಾಮಗಳನ್ನು ಜಗತ್ತು ಎದುರಿಸುತ್ತಿದೆ. ಈ ಕಾಲಘಟ್ಟದಲ್ಲಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ, ಪರಿಸರ ಸ್ನೇಹಿ ರೂಢಿಗಳ ಉತ್ತೇಜನ, ಆಧುನಿಕ ತಂತ್ರಜ್ಞಾನದ ಬಳಕೆ, ನಾವೀನ್ಯತೆಗೆ ಒತ್ತು ನೀಡಿ ಒಟ್ಟಾರೆ ಸುಸ್ಥಿರತೆ ಮಾದರಿಯ ಪರಿಣಾಮಕಾರಿ ಅನುಷ್ಠಾನ ಮಾಡುವ ಮೂಲಕ ಸುಸ್ಥಿರ ಅಭಿವೃದ್ಧಿಯತ್ತ ಸಾಗಬೇಕು ಎಂದು ಹೇಳಿದರು.
ಮರುಬಳಕೆ, ದುರಸ್ತಿ, ಪುನರ್ ಬಳಕೆ ಮಾಡುವ ಮೂಲಕ ಆರ್ಥಿಕವಾಗಿ ಕಾರ್ಯಸಾಧ್ಯವಾದ ರೀತಿಯಲ್ಲಿ ಕಾರ್ಯರೂಪಕ್ಕೆ ತರಬೇಕಿದೆ. ನಮ್ಮ ಭೂಗ್ರಹ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕಿದೆ ಎಂದು ಈಶ್ವರ ಖಂಡ್ರೆ ಹೇಳಿದರು.
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…