ಬೆಂಗಳೂರು: ನೈಸರ್ಗಿಕ ಸಂಪನ್ಮೂಲಗಳ ಸುದೀರ್ಘ ಬಳಕೆ ಮತ್ತು ಸಂರಕ್ಷಣೆಗಾಗಿ ಮರು ಬಳಕೆ ಮತ್ತು ಪುನರ್ ಬಳಕೆಗೆ ಒತ್ತು ನೀಡಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿಂದು ನಡೆದ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಮತ್ತು “ಸಂಪನ್ಮೂಲಗಳ ಸುದೀರ್ಘ ಬಳಕೆಯ ಆರ್ಥಿಕತೆ ಮತ್ತು ಸುಸ್ಥಿರತೆಯ ಸಮ್ಮೇಳನ” ಉದ್ಘಾಟಿಸಿ ಅವರು ಸಂಪನ್ಮೂಲದ ಹಿತ-ಮಿತ ಬಳಕೆಯ ಅಗತ್ಯ ಪ್ರತಿಪಾದಿಸಿದರು.
ಜೀವನವೂ ಇರಬೇಕು, ಜೀವನೋಪಾಯವೂ ಇರಬೇಕು, ಪ್ರಕೃತಿಯೂ ಉಳಿಯಬೇಕು, ಪ್ರಗತಿಯೂ ಆಗಬೇಕು ಎಂಬುದು ನಮ್ಮ ಸರ್ಕಾರದ ನಿಲುವಾಗಿದ್ದು, ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.
ಇದನ್ನು ಓದಿ: ಮಂಡ್ಯದ ಶಿವನಸಮುದ್ರದಲ್ಲಿ ಆಪರೇಷನ್ ಕಾಡಾನೆ
1987ರಲ್ಲಿ, ವಿಶ್ವಸಂಸ್ಥೆಯ ಬ್ರಂಡ್ಲ್ಯಾಂಡ್ ಆಯೋಗ ಭವಿಷ್ಯದ ಪೀಳಿಗೆಯ ಸ್ವಂತ ಅಗತ್ಯಗಳನ್ನು ಪೂರೈಸುವ ಸಾಮರ್ಥ್ಯದೊಂದಿಗೆ ರಾಜಿ ಮಾಡಿಕೊಳ್ಳದೆ ಇಂದಿನ ಪೀಳಿಗೆಯ ಅಗತ್ಯಗಳನ್ನು ಪೂರೈಸುವುದು ಸುಸ್ಥಿರತೆ ಎಂದು ವ್ಯಾಖ್ಯಾನಿಸಿದೆ. ನಾವು ಉತ್ತಮ ರೂಢಿಗಳನ್ನು ಅಳವಡಿಸಿಕೊಂಡು ಪ್ರಗತಿಯ ಪಥದಲ್ಲಿ ಸಾಗುವುದರ ಜೊತೆಗೆ ಪ್ರಕೃತಿ ಪರಿಸರ ಉಳಿಸಬೇಕಿದೆ ಎಂದರು.
ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ಪರಿಣಾಮಗಳನ್ನು ಜಗತ್ತು ಎದುರಿಸುತ್ತಿದೆ. ಈ ಕಾಲಘಟ್ಟದಲ್ಲಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ, ಪರಿಸರ ಸ್ನೇಹಿ ರೂಢಿಗಳ ಉತ್ತೇಜನ, ಆಧುನಿಕ ತಂತ್ರಜ್ಞಾನದ ಬಳಕೆ, ನಾವೀನ್ಯತೆಗೆ ಒತ್ತು ನೀಡಿ ಒಟ್ಟಾರೆ ಸುಸ್ಥಿರತೆ ಮಾದರಿಯ ಪರಿಣಾಮಕಾರಿ ಅನುಷ್ಠಾನ ಮಾಡುವ ಮೂಲಕ ಸುಸ್ಥಿರ ಅಭಿವೃದ್ಧಿಯತ್ತ ಸಾಗಬೇಕು ಎಂದು ಹೇಳಿದರು.
ಮರುಬಳಕೆ, ದುರಸ್ತಿ, ಪುನರ್ ಬಳಕೆ ಮಾಡುವ ಮೂಲಕ ಆರ್ಥಿಕವಾಗಿ ಕಾರ್ಯಸಾಧ್ಯವಾದ ರೀತಿಯಲ್ಲಿ ಕಾರ್ಯರೂಪಕ್ಕೆ ತರಬೇಕಿದೆ. ನಮ್ಮ ಭೂಗ್ರಹ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕಿದೆ ಎಂದು ಈಶ್ವರ ಖಂಡ್ರೆ ಹೇಳಿದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…