ಬೆಂಗಳೂರು: ಕಳೆದ ವರ್ಷ ಡಿಸೆಂಬರ್.27ರಂದು ಕನ್ನಡ ನಾಮಫಲಕ ಅನುಷ್ಠಾನಕ್ಕಾಗಿ ದೇಶದಾದ್ಯಂತ ದೊಡ್ಡ ಸಂಚಲನ ಮೂಡಿಸಿದ್ದ ಚಳುವಳಿ ಕೈಗೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಈಗ ಮತ್ತೊಂದು ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಿದೆ.
ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಚಳುವಳಿ ಆರಂಭಿಸಲಿದ್ದು, ಮುಂದಿನ ಸೋಮವಾರ ಅಂದರೆ ಜುಲೈ.1ರಂದು ರಾಜ್ಯಾದ್ಯಂತ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದೆ. ಸಾವಿರಾರು ಕರವೇ ಕಾರ್ಯಕರ್ತರು ಇದರಲ್ಲಿ ಪಾಲ್ಗೊಳ್ಳಿದ್ದಾರೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಎಲ್ಲಾ ಬಗೆಯ ಉದ್ಯೋಗದಲ್ಲಿ ಕನ್ನಡಿಗರದೇ ಸಿಂಹಪಾಲು ಇರಬೇಕೆಂಬುದು ನ್ಯಾಯಯುತವಾದ ಬೇಡಿಕೆ. ಇದಕ್ಕಾಗಿಯೇ ಡಾ.ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲಾಗಿತ್ತು. ಆದರೆ ಖಾಸಗಿ ವಲಯ ದೊಡ್ಡದಾಗಿ ಬೆಳೆದ ಹಿನ್ನೆಲೆಯಲ್ಲಿ ಡಾ.ಸರೋಜಿನಿ ಮಹಿಷಿ ವರದಿ ಸಮರ್ಪಕವಾಗಿ ಜಾರಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಕನ್ನಡದ ಯುವ ಸಮುದಾಯ ಉದ್ಯೋಗವಿಲ್ಲದೇ ಬಳಲುವಂತಾಗಿದೆ.
ಕರ್ನಾಟಕಕ್ಕೆ ಹೊರ ರಾಜ್ಯಗಳಿಂದ ಅವ್ಯಾಹತವಾಗಿ ವಲಸೆ ನಡೆಯುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಇದು ತೀವ್ರ ಸ್ವರೂಪ ಪಡೆದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಮಹಾನಗರಗಳು ವಲಸಿಗರ ಹಾವಳಿಯಿಂದ ಸಂಪೂರ್ಣ ಬದಲಾಗುತ್ತಿವೆ. ಕನ್ನಡಿಗರ ಉದ್ಯೋಗವನ್ನು ಹೊರರಾಜ್ಯದವರು ಕಿತ್ತುಕೊಳ್ಳುತ್ತಿದ್ದಾರೆ. ಕನ್ನಡಿಗರು ತಮ್ಮ ನೆಲದಲ್ಲೇ ನಿರುದ್ಯೋಗಿಗಳಾಗುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ದೊಡ್ಡ ಪ್ರಮಾಣದ ಚಳುವಳಿಗೆ ಸಜ್ಜಾಗಿದೆ ಎಂದು ನಾರಾಯಣಗೌಡ ಹೇಳಿದ್ದಾರೆ.
ನಾವು ಈಗ ಎಚ್ಚೆತ್ತುಕೊಳ್ಳದಿದ್ದರೆ ಕಾಲ ಮಿಂಚಿ ಹೋಗುತ್ತದೆ. ನಾವು ಮಾಡಿದ ತಪ್ಪುಗಳಿಗಾಗಿ ನಮ್ಮ ಬೇಜಾವಾಬ್ದಾರಿಗೆ ನಮ್ಮ ಮುಂದಿನ ಪೀಳಿಗೆ ನಮ್ಮನ್ನು ಶಪಿಸುವ ಕಾಲ ಬರುತ್ತದೆ. ಹೀಗಾಗಿ ಕನ್ನಡಿಗರನ್ನು, ಕನ್ನಡಿಗರ ಬದುಕನ್ನು ಉಳಿಸುವ ಕಾರ್ಯವನ್ನು ನಾವು ಮಾಡಲೇಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಜುಲೈ.1ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಂಡು, ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಲು ಆಗ್ರಹಿಸಲಿದೆ ಎಂದು ನಾರಾಯಣಗೌಡ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…