ರಾಜ್ಯ

ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ: ಮತ್ತೊಂದು ಹೋರಾಟಕ್ಕೆ ಸಜ್ಜಾದ ಕರವೇ ನಾರಾಯಣಗೌಡ

ಬೆಂಗಳೂರು: ಕಳೆದ ವರ್ಷ ಡಿಸೆಂಬರ್.‌27ರಂದು ಕನ್ನಡ ನಾಮಫಲಕ ಅನುಷ್ಠಾನಕ್ಕಾಗಿ ದೇಶದಾದ್ಯಂತ ದೊಡ್ಡ ಸಂಚಲನ ಮೂಡಿಸಿದ್ದ ಚಳುವಳಿ ಕೈಗೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಈಗ ಮತ್ತೊಂದು ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಿದೆ.

ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಚಳುವಳಿ ಆರಂಭಿಸಲಿದ್ದು, ಮುಂದಿನ ಸೋಮವಾರ ಅಂದರೆ ಜುಲೈ.1ರಂದು ರಾಜ್ಯಾದ್ಯಂತ ಬೃಹತ್‌ ಧರಣಿ ಸತ್ಯಾಗ್ರಹ ನಡೆಸಲಿದೆ. ಸಾವಿರಾರು ಕರವೇ ಕಾರ್ಯಕರ್ತರು ಇದರಲ್ಲಿ ಪಾಲ್ಗೊಳ್ಳಿದ್ದಾರೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಎಲ್ಲಾ ಬಗೆಯ ಉದ್ಯೋಗದಲ್ಲಿ ಕನ್ನಡಿಗರದೇ ಸಿಂಹಪಾಲು ಇರಬೇಕೆಂಬುದು ನ್ಯಾಯಯುತವಾದ ಬೇಡಿಕೆ. ಇದಕ್ಕಾಗಿಯೇ ಡಾ.ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲಾಗಿತ್ತು. ಆದರೆ ಖಾಸಗಿ ವಲಯ ದೊಡ್ಡದಾಗಿ ಬೆಳೆದ ಹಿನ್ನೆಲೆಯಲ್ಲಿ ಡಾ.ಸರೋಜಿನಿ ಮಹಿಷಿ ವರದಿ ಸಮರ್ಪಕವಾಗಿ ಜಾರಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಕನ್ನಡದ ಯುವ ಸಮುದಾಯ ಉದ್ಯೋಗವಿಲ್ಲದೇ ಬಳಲುವಂತಾಗಿದೆ.

ಕರ್ನಾಟಕಕ್ಕೆ ಹೊರ ರಾಜ್ಯಗಳಿಂದ ಅವ್ಯಾಹತವಾಗಿ ವಲಸೆ ನಡೆಯುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಇದು ತೀವ್ರ ಸ್ವರೂಪ ಪಡೆದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಮಹಾನಗರಗಳು ವಲಸಿಗರ ಹಾವಳಿಯಿಂದ ಸಂಪೂರ್ಣ ಬದಲಾಗುತ್ತಿವೆ. ಕನ್ನಡಿಗರ ಉದ್ಯೋಗವನ್ನು ಹೊರರಾಜ್ಯದವರು ಕಿತ್ತುಕೊಳ್ಳುತ್ತಿದ್ದಾರೆ. ಕನ್ನಡಿಗರು ತಮ್ಮ ನೆಲದಲ್ಲೇ ನಿರುದ್ಯೋಗಿಗಳಾಗುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ದೊಡ್ಡ ಪ್ರಮಾಣದ ಚಳುವಳಿಗೆ ಸಜ್ಜಾಗಿದೆ ಎಂದು ನಾರಾಯಣಗೌಡ ಹೇಳಿದ್ದಾರೆ.

ನಾವು ಈಗ ಎಚ್ಚೆತ್ತುಕೊಳ್ಳದಿದ್ದರೆ ಕಾಲ ಮಿಂಚಿ ಹೋಗುತ್ತದೆ. ನಾವು ಮಾಡಿದ ತಪ್ಪುಗಳಿಗಾಗಿ ನಮ್ಮ ಬೇಜಾವಾಬ್ದಾರಿಗೆ ನಮ್ಮ ಮುಂದಿನ ಪೀಳಿಗೆ ನಮ್ಮನ್ನು ಶಪಿಸುವ ಕಾಲ ಬರುತ್ತದೆ. ಹೀಗಾಗಿ ಕನ್ನಡಿಗರನ್ನು, ಕನ್ನಡಿಗರ ಬದುಕನ್ನು ಉಳಿಸುವ ಕಾರ್ಯವನ್ನು ನಾವು ಮಾಡಲೇಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಜುಲೈ.1ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್‌ ಧರಣಿ ಸತ್ಯಾಗ್ರಹ ಹಮ್ಮಿಕೊಂಡು, ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಲು ಆಗ್ರಹಿಸಲಿದೆ ಎಂದು ನಾರಾಯಣಗೌಡ ತಿಳಿಸಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಅರ್ಥಪೂರ್ಣ ಲೇಖನ

‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…

16 seconds ago

ಓದುಗರ ಪತ್ರ: ಹಾರ್ಡಿಂಜ್ ವೃತ್ತದಲ್ಲಿರುವ ನಿಲ್ದಾಣದಲ್ಲೇ ಬಸ್ ನಿಲುಗಡೆಯಾಗಲಿ

ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ…

2 mins ago

ಕರ್ನಾಟಕ ಸಂಘದ 2 ಪ್ರತಿಷ್ಠಿತ ಪ್ರಶಸ್ತಿಗಳ ಪ್ರದಾನಕ್ಕೆ ಸಜ್ಜು

ಪ್ರೊ.ಬಿ.ಜಯಪ್ರಕಾಶ್‌ಗೌಡ  ಡಾ.ರಾಮೇಗೌಡ, ದಿ.ಸಿಂಗಾರಿಗೌಡ ಹೆಸರಲ್ಲಿ ಗೌರವ  ವಿಮರ್ಶಕ, ಜಾನಪದ ತಜ್ಞ ಡಾ.ರಾಮೇಗೌಡ ಮತ್ತು ಸರಳ ಸಜ್ಜನ ರಾಜಕಾರಣಿ ದಿ. ಸಿಂಗಾರಿಗೌಡ…

6 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡಿಗರ ಕಣ್ಮಣಿ ಡಾ.ರಾಜಕುಮಾರ್ ನೆನಪಿನಂಗಳದಲ್ಲಿ ಗಾಜನೂರು

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ  ಏಪ್ರಿಲ್ ೧೨, ೨೦೦೬. ಶಿವರಾಜಕುಮಾರ್ ಅಭಿನಯದ ‘ಕುಮಾರ ರಾಮ; ಚಿತ್ರದ ಚಿತ್ರೀಕರಣ. ಭಾರ್ಗವ ನಿರ್ದೇಶಕರು. ಹಂಪಿಯಲ್ಲಿ…

14 mins ago

ಎಸ್‌ಎಸ್‌ಎಲ್‌ಸಿ ಫಲಿತಾಂಶ; ಕೊಡಗಿಗೆ 8ನೇ ಸ್ಥಾನ

ನವೀನ್ ಡಿಸೋಜ ಮಡಿಕೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ನಾಲ್ಕನೇ ಸ್ಥಾನದಲ್ಲಿದ್ದ ಕೊಡಗು ಈ ಬಾರಿ ೮ನೇ…

20 mins ago

ಎಸ್‌ಎಸ್‌ಎಲ್‌ಸಿ: ಜಿಲ್ಲೆಗೆ ಕೋಟೆ ಪ್ರಥಮ ಸ್ಥಾನ

ಮಂಜು ಕೋಟೆ ದಾಖಲೆ ಸೃಷ್ಟಿಸಿದ ಫಲಿತಾಂಶ; ಕ್ಷೇತ್ರ ಶಿಕ್ಷಣಾಧಿಕಾರಿ, ವಿದ್ಯಾರ್ಥಿ ವೇದಶ್ರೀ ಅವರಿಗೆ ಶಾಸಕರಿಂದ ಸನ್ಮಾನ  ಎಚ್.ಡಿ.ಕೋಟೆ: ತಾಲ್ಲೂಕಿನ ಇತಿಹಾಸದಲ್ಲಿ…

25 mins ago